July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆಯು ವಿಪುಲವಾದ ಅವಕಾಶಗಳನ್ನು ಪಡೆಯಲು ಮಾತ್ರವಲ್ಲದೇ ಜೀವನಕ್ಕೆ ಬೇಕಾದ ಚಾರಿತ್ರ್ಯ , ಸಂವಹನ , ಸೃಜನಶೀಲತೆ , ಉನ್ನತ ಕಾರ್ಯಕ್ಕೆ ಇನ್ನೊಬ್ಬರ ಮನ ಒಲಿಸುವ ಚಾಕಚಕ್ಯತೆ ಹಾಗೂ ಬದ್ಧತೆ ಇವುಗಳನ್ನು ಮೈಗೂಡಿಸಿಕೊಳ್ಳಲು ಸಹಕಾರಿಯಾಗಿದೆ. ನಾವು ಪುರಸ್ಕರಿಸಲ್ಪಡಲು ಇರುವ ಮಾರ್ಗಗಳನ್ನು ಕೂಡ ಎನ್ನೆಸ್ಸೆಸ್ ಕಲ್ಪಿಸಿಕೊಡುತ್ತದೆ. ಹೀಗೆ ಜೀವನದ ಧನಾತ್ಮಕ ತಿರುವಿಗೆ ರಾಷ್ಟ್ರೀಯ ಸೇವಾ ಯೋಜನೆ ಪೂರಕ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರು ಹಾಗೂ ರಾಜ್ಯಪ್ರಶಸ್ತಿ ವಿಜೇತ ಪ್ರಾಕ್ತನ ಎನ್ನೆಸ್ಸೆಸ್ ಯೋಜನಾಧಿಕಾರಿ ಡಾ. ಟಿ. ಕೃಷ್ಣಮೂರ್ತಿ ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅವರು ಮಾತನಾಡಿ ಭಾವೀ ಜೀವನದಲ್ಲಿ ಸಾಧನೆ ಹಾಗೂ ಸ್ಥಾನಮಾನಕ್ಕಾಗಿ ರಾ.ಸೇ ಯೋಜನೆಯು ಸಹಾಯಕ ಎಂದು ತಿಳಿಸಿದರು.

ಸಹ ಪ್ರಾಚಾರ್ಯ ಡಾ. ರಾಜೇಶ್ ಬಿ ಅವರು ಶುಭಾಶಂಸನೆ ಮಾಡಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಕಛೇರಿ ಸಿಬ್ಬಂದಿಗಳಾದ ರಂಜಿತಾ ಹಾಗೂ ಚಂದ್ರಹಾಸ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಸನ್ಮಾನಿತರ ವಿವರ ನೀಡಿದರು.
ಸಲಹಾ ಸಮಿತಿಯ ಸದಸ್ಯರಾದ ಧನುಷ್ , ನಾಯಕರಾದ ಆದಿತ್ಯ ವಿ ಶರ್ಮಾ ಹಾಗೂ ಪ್ರಾಪ್ತಿ ಗೌಡ ಅವರನ್ನು ಗೌರವಿಸಲಾಯಿತು.

ಎರಡು ವರ್ಷಗಳ ಕಾಲ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದ ವಿದ್ಯಾರ್ಥಿ ಸ್ವಯಂ ಸೇವಕರಿಗೆ ಪ್ರಮಾಣ ಪತ್ರ ನೀಡಲಾಯಿತು.
ಅಭಿಜಿತ್ , ಶ್ರಾವ್ಯ , ಐಶ್ವರ್ಯ , ಶ್ರುತಾ , ಸೌಜನ್ಯ ಹಾಗೂ ಆದಿತ್ಯ ಜೈನ್ ಇವರಿಗೆ ಉತ್ತಮ ಸ್ವಯಂ ಸೇವಕ ಬಹುಮಾನ ನೀಡಿ ಗೌರವಿಸಲಾಯಿತು.

ಘಟಕದ ನಾಯಕಿ ಪ್ರಾಪ್ತಿ ಗೌಡ ವಾರ್ಷಿಕ ವರದಿ ವಾಚಿಸಿದರು. ಸಂಕೇತ್ ಸ್ವಾಗತಿಸಿ , ಘಟಕದ ನಾಯಕ ಆದಿತ್ಯ ವಿ ವಂದಿಸಿದರು. ಸಂತೋಷ್ ನಿರೂಪಿಸಿದರು.

Related posts

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya

ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಗುರು ಗಾಂಧಿ ಸಂವಾದ ಕಾರ್ಯಕ್ರಮ ಮತ್ತು ಕೋಟಿ ಚೆನ್ನಯ್ಯ ಕ್ರೀಡಾಕೂಟದ ಪೂರ್ವಭಾವಿ ಸಭೆ

Suddi Udaya
error: Content is protected !!