25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

ಉಜಿರೆ: ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಉಷಾಕಿರಣ್‌ ಕಾರಂತ್ ರವರ ಅಧ್ಯಕ್ಷತೆಯಲ್ಲಿ ಜ.9ರಂದು ಉಜಿರೆ ಶಾರದಾ ಮಂಟಪದಲ್ಲಿ ಜರಗಿತು.

ಮಾರ್ಗದರ್ಶನ ಅಧಿಕಾರಿಯಾಗಿ ನೆರಿಯ ಪಶು ವೈದ್ಯಾಧಿಕಾರಿ ಡಾ. ಯತೀಶ್ ಕುಮಾರ್ ಸಭೆಯನ್ನು ಮುನ್ನಡೆಸಿದರು.

ಮುಖ್ಯ ಮಂತ್ರಿ ಪದಕ ಪುರಸ್ಕೃತ ಉಪ ವಲಯ ಅರಣ್ಯಧಿಕಾರಿ ಕು. ಕಮಲಾ ರವರಿಗೆ ಸಭೆಯಲ್ಲಿ ಗೌರವಿಸಲಾಯಿತು. ಪ.ಜಾತಿ ಪ. ಪಂಗಡದ 580 ಕುಟುಂಬಗಲಿಗೆ ಕುರ್ಚಿಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್‌ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್‌ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ. ಹೆಚ್. ಪ್ರಕಾಶ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸಿಬ್ಬಂದಿ ರಮೇಶ್ ನಾಯ್ಕ ವಾರ್ಡ್‌ ಸಭೆಗಳಲ್ಲಿ ಬಂದ ಬೇಡಿಕೆಯನ್ನು ಓದಿದರು. ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು. ಕಾರ್ಯದರ್ಶಿ ಶ್ರವಣ್ ಕುಮಾರ್ ವಂದಿಸಿದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಪರಿಹಾರ

Suddi Udaya
error: Content is protected !!