September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

ಉಜಿರೆ: ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಉಷಾಕಿರಣ್‌ ಕಾರಂತ್ ರವರ ಅಧ್ಯಕ್ಷತೆಯಲ್ಲಿ ಜ.9ರಂದು ಉಜಿರೆ ಶಾರದಾ ಮಂಟಪದಲ್ಲಿ ಜರಗಿತು.

ಮಾರ್ಗದರ್ಶನ ಅಧಿಕಾರಿಯಾಗಿ ನೆರಿಯ ಪಶು ವೈದ್ಯಾಧಿಕಾರಿ ಡಾ. ಯತೀಶ್ ಕುಮಾರ್ ಸಭೆಯನ್ನು ಮುನ್ನಡೆಸಿದರು.

ಮುಖ್ಯ ಮಂತ್ರಿ ಪದಕ ಪುರಸ್ಕೃತ ಉಪ ವಲಯ ಅರಣ್ಯಧಿಕಾರಿ ಕು. ಕಮಲಾ ರವರಿಗೆ ಸಭೆಯಲ್ಲಿ ಗೌರವಿಸಲಾಯಿತು. ಪ.ಜಾತಿ ಪ. ಪಂಗಡದ 580 ಕುಟುಂಬಗಲಿಗೆ ಕುರ್ಚಿಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್‌ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್‌ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ. ಹೆಚ್. ಪ್ರಕಾಶ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸಿಬ್ಬಂದಿ ರಮೇಶ್ ನಾಯ್ಕ ವಾರ್ಡ್‌ ಸಭೆಗಳಲ್ಲಿ ಬಂದ ಬೇಡಿಕೆಯನ್ನು ಓದಿದರು. ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು. ಕಾರ್ಯದರ್ಶಿ ಶ್ರವಣ್ ಕುಮಾರ್ ವಂದಿಸಿದರು.

Related posts

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya
error: Content is protected !!