30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

ಕಳೆಂಜ : ಶ್ರೀ ಕ್ಷೇತ್ರದ ವತಿಯಿಂದ,ಕ್ಷೇತ್ರದ ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಇದರ ಅಧ್ಯಕ್ಷರಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಕಳೆಂಜ ಸದಾಶಿವೇಶ್ವರ ದೇವಸ್ಥಾನದ ಸಭಾಭವನದ ರಚನೆಗೆ ಮಂಜೂರು ಮಾಡಿರುವ ರೂ. 2ಲಕ್ಷ ಮೊತ್ತದ ಮಂಜುರಾತಿ ಪತ್ರವನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರರವರು ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಆಡಳಿತ ಸಮಿತಿಯ ಅಧ್ಯಕ್ಷ ಕೆ ಶ್ರೀಧರ್ ರಾವ್ ರವರಿಗೆ ಮಂಜೂರಾತಿ ಪತ್ರವನ್ನು ಸಮಿತಿಯ ಪ್ರಮುಖರು ಹಾಗೂ ಒಕ್ಕೂಟದ ಪದಾಧಿಕಾರಿಗಳ ಸಮ್ಮುಖದಲ್ಲಿ ಹತ್ತಾಂತರಿಸಲಾಯಿತು.

ಈ ಸಂದರ್ಭ ಆಡಳಿತ ಮಂಡಳಿಯ ಕಾರ್ಯದರ್ಶಿ ಕುಸುಮಕರ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ಕೇಶವ ಗೌಡ ಮಲ್ಲಜಾಲು, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಬರಮೇಲು, ಆಡಳಿತ ಮಂಡಳಿಯ ಸದಸ್ಯ ನೀಲಯ್ಯ ಗೌಡ, ಹಿರಿಯರಾದ ಬಾಲಣ್ಣ ಗೌಡ ಬದಿಮಾರು, ರಾಮಚಂದ್ರಗೌಡ ಕೊಲಂಬೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಸವಿತಾ ಬರಮೇಲು, ಒಕ್ಕೂಟದ ಮಾಜಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ಪ್ರೇಮ ಬಿ ಎಸ್, ರುಕ್ಮಯ ಗೌಡ ಬರಮೇಲು, ಗೀತಾ ಕಜೆತಕೊಡಿ, ಉಮೇಶ್ ರೈ, ಮೇಲ್ವಿಚಾರಕರಾದ ರವೀಂದ್ರ, ತಾಲೂಕಿನ ಕೃಷಿ ಅಧಿಕಾರಿ ರಾಮ್ ಕುಮಾರ್ ಉಪಸ್ಥಿತರಿದ್ದರು.

Related posts

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya
error: Content is protected !!