23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

ಬೆಂಗಳೂರು: ನಿನ್ನೆ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ವಿಶೇಷ ಕೋರ್ಟ್ ಆದೇಶ ನೀಡಿದೆ. ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ಶರಣಾಗಿದ್ದ ನಕ್ಸಲರನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. ಜ.9ರಂದು ಅವರನ್ನು ಎನ್‌ಐಎ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್‌ಗೆ ಹಾಜರುಪಡಿಸುವ ಮುನ್ನ 6 ನಕ್ಸಲರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿತ್ತು. ನಂತರ 6 ನಕ್ಸಲರನ್ನು ಬಿಗಿ ಪೊಲೀಸ್‌ ಬಂಧೋಬಸ್ತ್ ನಲ್ಲಿ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಎನ್‌ಐಎ ವಿಶೇಷ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು.

ರಾಜ್ಯದ ನಕ್ಸಲ್ ನಾಯಕರಾದ ಮುಂಡಗಾರು ಲತಾ, ಸುಂದರಿ ಕೂತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್ ಟಿ.ಎನ್, ಮಾರೆಪ್ಪ ಅರೋಲಿ ಅವರನ್ನು ಇಂದು ಚಿಕ್ಕಮಗಳೂರು ಡಿವೈಎಸ್‌ಪಿ ಬಾಲಾಜಿ ಸಿಂಗ್ ಎನ್‌ಐಎ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಗಂಗಾಧರ್ ಮುಂದೆ ಹಾಜರುಪಡಿಸಿದ್ದರು. ಆರು ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಕೆಲವೇ ಕ್ಷಣಗಳಲ್ಲಿ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು.

Related posts

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಪೋಷಕರ ಸಭೆ

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya
error: Content is protected !!