23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

ಉಜಿರೆ :ಇಲ್ಲಿನ ಸರಕಾರಿ ಉನ್ನತೀಕರಿಸಿದ ಶಾಲೆ ಬದನಾಜೆಯ ಶಾಲಾ ಸಭಾಂಗಣ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ರೂಪದಲ್ಲಿ ಒಂದು ಲಕ್ಷ ರೂಪಾಯಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ದ.ಕ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ಕುಮಾರ್, ನಿವೃತ್ತ ಪ್ರಾದೇಶಿಕ ನಿರ್ದೇಶಕ ಸೀತಾರಾಮ ಶೆಟ್ಟಿ ಕೆಂಬರ್ಜೆ, ಉಜಿರೆ ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಸೇವಾ ಪ್ರತಿನಿಧಿ ಶ್ರೀಮತಿ ಹೇಮಲತಾ ನೀಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರುಗಳಾದ ಬಾಬು ನಾಯ್ಕ ಮತ್ತು ಸುರೇಶ್ ನಾಯ್ಕ ಉಪಸ್ಥಿತರಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ನಿರಂಜನ್, ಸುಜ್ಞಾನ ನಿಧಿ ಯೋಜನೆಯ ಸಂಚಾಲಕರಾದ ಸುಂದರ ಬಂಗೇರ ಮತ್ತು ಸಹ ಸಂಚಾಲಕರಾದ ಸೋಮಶೇಖರ,ಕೆ ಮತ್ತು ಪ್ರಗತಿ ಯುವಕ ಮಂಡಲದ ಅಧ್ಯಕ್ಷ ಪಿತಾಂಬರ ಪೂಜಾರಿ ದೇಣಿಗೆಯ ಚೆಕ್ಕನ್ನು ಸ್ವೀಕರಿಸಿದರು.

ಬದನಾಜೆ ಶಾಲೆಯಲ್ಲಿ ಮಕ್ಕಳ ಕ್ಷೀರ ಭಾಗ್ಯ, ಅಕ್ಷರ ದಾಸೋಹ, ಶಾಲಾ ಪ್ರಾರ್ಥನೆಗೆ, ಸಭೆ ಸಮಾರಂಭಗಳಿಗೆ ಅನುಕೂಲವಾಗುವಂತೆ ಸುಮಾರು 15 ಲಕ್ಷ ವೆಚ್ಚದಲ್ಲಿ ಸಭಾಂಗಣ ರಚನೆ ಕಾರ್ಯ ಪ್ರಗತಿಯಲ್ಲಿದ್ದು,ಶಾಲಾ ಹಿರಿಯ ವಿದ್ಯಾರ್ಥಿಗಳು, ಶಾಲಾಭಿಮಾನಿಗಳು ಕೈ ಜೋಡಿಸುತ್ತಿದ್ದಾರೆ. ಶಾಲಾ ಬೇಡಿಕೆಯನ್ನು ಮನ್ನಿಸಿ ಸಭಾಂಗಣಕ್ಕೆ ದೇಣಿಗೆ ನೀಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರಿಗೆ ಶಾಲಾ ಶಿಕ್ಷಕವೃಂದ, ಪೋಷಕರು, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ವಿದ್ಯಾಭಿಮಾನಿಗಳು ಭಕ್ತಿ ಪೂರ್ವಕ ವಂದನೆಗಳನ್ನು ಸಲ್ಲಿಸಿದರು.

Related posts

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ ಆಡಳಿತ ಮಂಡಳಿಯವರಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಕೊಕ್ಕಡ: ಸೆಲ್ಕೋ ಫೌಂಡೇಶನ್ ನಿಂದ 25 ಮಂದಿ ಅರ್ಹ ಫಲಾನುಭವಿಗಳಿಗೆ ಸೋಲಾರ್ ಕಿಟ್ ಗಳ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!