22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

ಬಳಂಜ: ನಾಲ್ಕೂರು ಶ್ರೀ ಮಾತಾ ಇವರ ನೇತೃತ್ವದಲ್ಲಿ ಖ್ಯಾತ ಕಂಬಳ ಓಟಗಾರರು ದಿ| ರಮಾನಂದ ಪೂಜಾರಿ ಯೈಕುರಿ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಜ.11 ರಂದು ಬಳಂಜ ಕೊಡಮಣಿತ್ತಾಯ ದೈವದ ಆವರಣದಲ್ಲಿ ಸಂಜೆ 7 ರಿಂದ ನಡೆಯಲಿದೆ.

ಕ್ರೀಡಾಂಗಣ ಉದ್ಘಾಟನೆಯನ್ನು ಗುರುವಾಯನಕೆರೆ ನಿಸರ್ಗ ಕರ್ಟನ್ಸ್ ಮಾಲಕ ನಾಗೇಶ್ ಕೋಟ್ಯಾನ್ ಬರಾಯ ನೆರವೇರಿಸಲಿದ್ದಾರೆ.

ಸಮಾರಂಭದ ಉದ್ಘಾಟನೆಯನ್ನು ವಿಜಯ ಪೂಜಾರಿ ಯೈಕುರಿ ನೆರವೇರಿಸಲಿದ್ದು,ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಉದ್ಯೋಗಿ ಪ್ರವೀಣ್ ಕುಮಾರ್ ಎಚ್.ಎಸ್ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಭಾರತೀಯ ಸೇನೆಗೆ ಆಯ್ಕೆಯಾದ ಬಳಂಜದ ಯುವಕ ಮನೋಹರ್ ಪೂಜಾರಿ ಕೆಂಪುಂರ್ಜ ರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಯುವಶಕ್ತಿ ನಾಲ್ಕೂರು- ಟೀಮ್ ಯುವಶಕ್ತಿ, ಎನ್..ಕೆ ಅಟ್ಯಾಕರ್ಸ್- ನೀಲಯ್ಯ ಕಾವೋಡಿ, ಎಸ್.ವಿಎಸ್ ಬಳಂಜ- ಸತೀಶ್ ದೇವಾಡಿಗ, ಕೋಟಿ ಚೆನ್ನಯ್ಯ- ರವೀಂದ್ರ ಡಿ. ಅಮೀನ್, ಶುಭೋದಯ ಸಾವ್ಯ-ವಿನೀತ್ ಕೋಟ್ಯಾನ್, ಭಜರಂಗಿ ಬಾಯ್ಸ್-ಸ್ವಸ್ತಿಕ್ ಆರ್ಯ, ಶ್ರೀ ವಿಷ್ಣು ಕಟ್ಟೆ-ಕಾಸಿಂ ಕಟ್ಟೆ, ಧರ್ಮ ಶಾಸ್ತ ಮಲೆಬೆಟ್ಟು- ಗಿರೀಶ್ ಮಲೆಬೆಟ್ಟು, ಶಿವ ಪ್ರೆಂಡ್ಸ್ ಸೂರ್ಯ -ದಿಕ್ಷೀತ್ ಸೂರ್ಯ, ಸಂಗಮ್ ಪ್ರೆಂಡ್ಸ್ -ರಾಜ್ ಕಿಶನ್ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದೆ.

ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಪ್ರಥಮ 10000/- ನಗದು ಮತ್ತು ಶ್ರೀ ಮಾತಾ ಟ್ರೋಫಿ, ದ್ವಿತೀಯ 6000/- ನಗದು ಮತ್ತು ಶ್ರೀ ಮಾತಾ ಟ್ರೋಫಿ, ತೃತೀಯ 3000/- ನಗದು ಮತ್ತು ಶ್ರೀ ಮಾತಾ ಟ್ರೋಫಿ, ಚತುರ್ಥ 3000/- ನಗದು ಮತ್ತು ಶ್ರೀ ಮಾತಾ ಟ್ರೋಫಿ ಸಿಗಲಿದೆ ಎಂದು ಶ್ರೀಮಾತ ನಾಲ್ಕೂರು ಸಂಘಟನೆಯ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಗಾಳಿ-ಮಳೆ: ಬೃಹತ್ ಮರ ಉರುಳಿ ಬಿದ್ದು, ಅಡಕೆ ಗಿಡಗಳು ಧರಾಶಾಹಿ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

Suddi Udaya

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್ ಮತ್ತು ಸಾತ್ವಿಕ್ ಯಂ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!