37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

ಬೆಳ್ತಂಗಡಿ: ನಾಪತ್ತೆಯಾಗಿದ್ದ ನೆಲ್ಲಿಕಾರಿನ ಮುಸ್ಲಿಂ ಯುವತಿಯು ತಾನು ಪ್ರೀತಿಸುತ್ತಿದ್ದ ಪಟ್ರಮೆಯ ಹಿಂದೂ ಯುವಕನೊಂದಿಗೆ ದೇವಸ್ಥಾನದಲ್ಲಿ ವಿವಾಹವಾಗಿರುವ ಘಟನೆ ನಡೆದಿದೆ.

ನೆಲ್ಲಿಕಾರಿನ ಯುವತಿ ನಾಪತ್ತೆಯಾದ ಬಗ್ಗೆ ಯುವತಿ ಮನೆಯವರು ಮೂಡಬಿದ್ರೆಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ನಾಪತ್ತೆಯಾಗಿದ್ದ ಯುವತಿ ಹಾಗೂ ಧರ್ಮಸ್ಥಳ ಸಮೀಪದ ಪಟ್ರಮೆಯ ಹರೀಶ್ ಎಂಬ ಯುವಕನ ನಡುವೆ ಕಳೆದ ಒಂದು ವರ್ಷದಿಂದ ಫೇಸ್‌ಬುಕ್ ಮೂಲಕ ಪರಿಚಯವಾಗಿ ಮುಂದೆ ಅವರಿಬ್ಬರ ನಡುವೆ ಪ್ರೇಮಾಂಕುರವಾಗಲು ಕಾರಣವಾಗಿತ್ತು. ಇಬ್ಬರು ವಿವಾಹವಾಗಲು ನಿರ್ಧಾರಕ್ಕೆ ಬಂದಿದ್ದರು. ಈ ಹಿನ್ನಲೆಯಲ್ಲಿ ಯುವತಿ ಮನೆಮಂದಿಗೂ ತಿಳಿಸದೇ ಯುವಕನ ಸೂಚನೆಯಂತೆ ನೇರವಾಗಿ ಬೆಳ್ತಂಗಡಿಗೆ ಬಂದಿದ್ದರು.

ದೇವಸ್ಥಾನದಲ್ಲಿ ಇಬ್ಬರು ಹಾರ ಬದಲಾಯಿಸಿಕೊಂಡು ಮಾಂಗಲ್ಯಧಾರಣೆ ಮಾಡಿದ್ದಾರೆ. ಮುಸ್ಲಿಂ ಯುವತಿ ತನ್ನ ಇಚ್ಚೆಯಂತೆ ಹಿಂದು ಸಂಪ್ರದಾಯ ಪ್ರಕಾರ ಹಿಂದು ಯುವಕನೊಂದಿಗೆ ವಿವಾಹವಾಗಿದ್ದಳು. ನವದಂಪತಿ ನೇರವಾಗಿ ಬೆಳ್ತಂಗಡಿ ವಿವಾಹ ನೊಂದಾವಣಾ ಕಚೇರಿಗೆ ತೆರಳಿ, ಹಿಂದು ವಿವಾಹ ಕಾಯಿದೆಯ ಪ್ರಕಾರ ವಿವಾಹ ನೊಂದಾವಣೆಗೆ ಅರ್ಜಿ ಸಲ್ಲಿಸಿದ್ದಾರೆ.

ಯುವತಿ ನಾಪತ್ತೆ ಪ್ರಕರಣ ಕುರಿತು ಮೂಡುಬಿದಿರೆ ಪೊಲೀಸರು ತನಿಖೆ ಆರಂಭಿಸಿದ್ದರು. ಅದೇ ಸಂದರ್ಭದಲ್ಲಿ ಇವರಿಬ್ಬರು ವಿವಾಹವಾಗಿ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದರು. ಈ ವಿಚಾರವು ಮೂಡಬಿದ್ರೆಯ ಪೊಲೀಸರಿಗೆ ತಿಳಿಯುತ್ತಿದ್ದಂತೆ ಆಕೆಯ ಮನೆಮಂದಿಯನ್ನು ಠಾಣೆಗೆ ಕರೆಯಿಸಿ ನಡೆದಿರುವ ಬೆಳವಣಿಗೆ ಹಾಗೂ ವಿವಾಹವಾದ ಫೋಟೋಗಳನ್ನು ತೋರ್ಪಡಿಸಿದ್ದಾರೆ.

Related posts

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya
error: Content is protected !!