25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

ಬೆಳ್ತಂಗಡಿ: ನಾಪತ್ತೆಯಾಗಿದ್ದ ನೆಲ್ಲಿಕಾರಿನ ಮುಸ್ಲಿಂ ಯುವತಿಯು ತಾನು ಪ್ರೀತಿಸುತ್ತಿದ್ದ ಪಟ್ರಮೆಯ ಹಿಂದೂ ಯುವಕನೊಂದಿಗೆ ದೇವಸ್ಥಾನದಲ್ಲಿ ವಿವಾಹವಾಗಿರುವ ಘಟನೆ ನಡೆದಿದೆ.

ನೆಲ್ಲಿಕಾರಿನ ಯುವತಿ ನಾಪತ್ತೆಯಾದ ಬಗ್ಗೆ ಯುವತಿ ಮನೆಯವರು ಮೂಡಬಿದ್ರೆಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ನಾಪತ್ತೆಯಾಗಿದ್ದ ಯುವತಿ ಹಾಗೂ ಧರ್ಮಸ್ಥಳ ಸಮೀಪದ ಪಟ್ರಮೆಯ ಹರೀಶ್ ಎಂಬ ಯುವಕನ ನಡುವೆ ಕಳೆದ ಒಂದು ವರ್ಷದಿಂದ ಫೇಸ್‌ಬುಕ್ ಮೂಲಕ ಪರಿಚಯವಾಗಿ ಮುಂದೆ ಅವರಿಬ್ಬರ ನಡುವೆ ಪ್ರೇಮಾಂಕುರವಾಗಲು ಕಾರಣವಾಗಿತ್ತು. ಇಬ್ಬರು ವಿವಾಹವಾಗಲು ನಿರ್ಧಾರಕ್ಕೆ ಬಂದಿದ್ದರು. ಈ ಹಿನ್ನಲೆಯಲ್ಲಿ ಯುವತಿ ಮನೆಮಂದಿಗೂ ತಿಳಿಸದೇ ಯುವಕನ ಸೂಚನೆಯಂತೆ ನೇರವಾಗಿ ಬೆಳ್ತಂಗಡಿಗೆ ಬಂದಿದ್ದರು.

ದೇವಸ್ಥಾನದಲ್ಲಿ ಇಬ್ಬರು ಹಾರ ಬದಲಾಯಿಸಿಕೊಂಡು ಮಾಂಗಲ್ಯಧಾರಣೆ ಮಾಡಿದ್ದಾರೆ. ಮುಸ್ಲಿಂ ಯುವತಿ ತನ್ನ ಇಚ್ಚೆಯಂತೆ ಹಿಂದು ಸಂಪ್ರದಾಯ ಪ್ರಕಾರ ಹಿಂದು ಯುವಕನೊಂದಿಗೆ ವಿವಾಹವಾಗಿದ್ದಳು. ನವದಂಪತಿ ನೇರವಾಗಿ ಬೆಳ್ತಂಗಡಿ ವಿವಾಹ ನೊಂದಾವಣಾ ಕಚೇರಿಗೆ ತೆರಳಿ, ಹಿಂದು ವಿವಾಹ ಕಾಯಿದೆಯ ಪ್ರಕಾರ ವಿವಾಹ ನೊಂದಾವಣೆಗೆ ಅರ್ಜಿ ಸಲ್ಲಿಸಿದ್ದಾರೆ.

ಯುವತಿ ನಾಪತ್ತೆ ಪ್ರಕರಣ ಕುರಿತು ಮೂಡುಬಿದಿರೆ ಪೊಲೀಸರು ತನಿಖೆ ಆರಂಭಿಸಿದ್ದರು. ಅದೇ ಸಂದರ್ಭದಲ್ಲಿ ಇವರಿಬ್ಬರು ವಿವಾಹವಾಗಿ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದರು. ಈ ವಿಚಾರವು ಮೂಡಬಿದ್ರೆಯ ಪೊಲೀಸರಿಗೆ ತಿಳಿಯುತ್ತಿದ್ದಂತೆ ಆಕೆಯ ಮನೆಮಂದಿಯನ್ನು ಠಾಣೆಗೆ ಕರೆಯಿಸಿ ನಡೆದಿರುವ ಬೆಳವಣಿಗೆ ಹಾಗೂ ವಿವಾಹವಾದ ಫೋಟೋಗಳನ್ನು ತೋರ್ಪಡಿಸಿದ್ದಾರೆ.

Related posts

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

Suddi Udaya

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ: ಪವರ್ ಆನ್ ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ರಿಯಾಯಿತಿ,

Suddi Udaya

ಬೆಳ್ತಂಗಡಿ: ಆ.7ರಿಂದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!