July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

ಬೆಳ್ತಂಗಡಿ: ನಾಪತ್ತೆಯಾಗಿದ್ದ ನೆಲ್ಲಿಕಾರಿನ ಮುಸ್ಲಿಂ ಯುವತಿಯು ತಾನು ಪ್ರೀತಿಸುತ್ತಿದ್ದ ಪಟ್ರಮೆಯ ಹಿಂದೂ ಯುವಕನೊಂದಿಗೆ ದೇವಸ್ಥಾನದಲ್ಲಿ ವಿವಾಹವಾಗಿರುವ ಘಟನೆ ನಡೆದಿದೆ.

ನೆಲ್ಲಿಕಾರಿನ ಯುವತಿ ನಾಪತ್ತೆಯಾದ ಬಗ್ಗೆ ಯುವತಿ ಮನೆಯವರು ಮೂಡಬಿದ್ರೆಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ನಾಪತ್ತೆಯಾಗಿದ್ದ ಯುವತಿ ಹಾಗೂ ಧರ್ಮಸ್ಥಳ ಸಮೀಪದ ಪಟ್ರಮೆಯ ಹರೀಶ್ ಎಂಬ ಯುವಕನ ನಡುವೆ ಕಳೆದ ಒಂದು ವರ್ಷದಿಂದ ಫೇಸ್‌ಬುಕ್ ಮೂಲಕ ಪರಿಚಯವಾಗಿ ಮುಂದೆ ಅವರಿಬ್ಬರ ನಡುವೆ ಪ್ರೇಮಾಂಕುರವಾಗಲು ಕಾರಣವಾಗಿತ್ತು. ಇಬ್ಬರು ವಿವಾಹವಾಗಲು ನಿರ್ಧಾರಕ್ಕೆ ಬಂದಿದ್ದರು. ಈ ಹಿನ್ನಲೆಯಲ್ಲಿ ಯುವತಿ ಮನೆಮಂದಿಗೂ ತಿಳಿಸದೇ ಯುವಕನ ಸೂಚನೆಯಂತೆ ನೇರವಾಗಿ ಬೆಳ್ತಂಗಡಿಗೆ ಬಂದಿದ್ದರು.

ದೇವಸ್ಥಾನದಲ್ಲಿ ಇಬ್ಬರು ಹಾರ ಬದಲಾಯಿಸಿಕೊಂಡು ಮಾಂಗಲ್ಯಧಾರಣೆ ಮಾಡಿದ್ದಾರೆ. ಮುಸ್ಲಿಂ ಯುವತಿ ತನ್ನ ಇಚ್ಚೆಯಂತೆ ಹಿಂದು ಸಂಪ್ರದಾಯ ಪ್ರಕಾರ ಹಿಂದು ಯುವಕನೊಂದಿಗೆ ವಿವಾಹವಾಗಿದ್ದಳು. ನವದಂಪತಿ ನೇರವಾಗಿ ಬೆಳ್ತಂಗಡಿ ವಿವಾಹ ನೊಂದಾವಣಾ ಕಚೇರಿಗೆ ತೆರಳಿ, ಹಿಂದು ವಿವಾಹ ಕಾಯಿದೆಯ ಪ್ರಕಾರ ವಿವಾಹ ನೊಂದಾವಣೆಗೆ ಅರ್ಜಿ ಸಲ್ಲಿಸಿದ್ದಾರೆ.

ಯುವತಿ ನಾಪತ್ತೆ ಪ್ರಕರಣ ಕುರಿತು ಮೂಡುಬಿದಿರೆ ಪೊಲೀಸರು ತನಿಖೆ ಆರಂಭಿಸಿದ್ದರು. ಅದೇ ಸಂದರ್ಭದಲ್ಲಿ ಇವರಿಬ್ಬರು ವಿವಾಹವಾಗಿ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದರು. ಈ ವಿಚಾರವು ಮೂಡಬಿದ್ರೆಯ ಪೊಲೀಸರಿಗೆ ತಿಳಿಯುತ್ತಿದ್ದಂತೆ ಆಕೆಯ ಮನೆಮಂದಿಯನ್ನು ಠಾಣೆಗೆ ಕರೆಯಿಸಿ ನಡೆದಿರುವ ಬೆಳವಣಿಗೆ ಹಾಗೂ ವಿವಾಹವಾದ ಫೋಟೋಗಳನ್ನು ತೋರ್ಪಡಿಸಿದ್ದಾರೆ.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya
error: Content is protected !!