29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

ಬಂದಾರು : ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ ಶ್ರೀ ಸಿದ್ದಿವಿನಾಯಕ ಸಭಾಭವನದಲ್ಲಿ ಜ 07 ರಂದು ನಡೆಯಿತು.

ಬ್ರಹ್ಮಕಲಶೋತ್ಸವ ಸಮಿತಿ ಗೌರವ ಮಾರ್ಗದರ್ಶಕರಾದ ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಆಡಳಿತ ಮೊಕ್ತೇಸರರಾದ ಶರತ್ ಪಡ್ವೆಟ್ನಾಯರು ಸಭಾ ಅಧ್ಯಕ್ಷತೆಯನ್ನು ವಹಿಸಿದ್ದರು. ಬೆಳಾಲು ಶ್ರೀ ಕ್ಷೇತ್ರ ಆರಿಕೋಡಿ ಧರ್ಮದರ್ಶಿಗಳಾದ ಹರೀಶ್ ಗೌಡ, ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನ ಅಧ್ಯಕ್ಷ ಸಂಪತ್ ಸುವರ್ಣ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕರಾದ ದುಗ್ಗೆ ಗೌಡ, ಬೆಳ್ತಂಗಡಿ ವಕೀಲರಾದ ಧನಂಜಯ ರಾವ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಅವರು ಸಮಯೋಚಿತವಾಗಿ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರಾದ ಚಿದಾನಂದ ರಾವ್ ಕೊಲ್ಲಾಜೆ, ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ಮಲೆಬೆಟ್ಟು ಶ್ರೀ ವನದುರ್ಗ ದೇವಸ್ಥಾನ ಆಡಳಿತ ಮೊಕ್ತೇಸರರಾದ ಗಣೇಶ್ ಭಟ್ ಕಾಂತಾಜೆ, ಮಂಗಳೂರು ಎಂ.ಸಿ. ಎಫ್ ಸೀನಿಯರ್ ಇಂಜಿನಿಯರ್ ಪ್ರವೀಣ್ ಗೌಡ ಅಂಗಡಿಮಜಲು, ಇವರುಗಳ ಗೌರವ ಉಪಸ್ಥಿತಿ, ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಅಧ್ಯಕ್ಷರಾದ ಮಹಾಬಲ ಗೌಡ,ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾದೆ,ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ಭಜನಾ ಮಂಡಳಿ ಅಧ್ಯಕ್ಷರಾದ ಲಕ್ಷ್ಮಣ ಗೌಡ ಫಲಸದಕೋಡಿ, ಮಹಿಳಾ ಸಮಿತಿ ಅಧ್ಯಕ್ಷರಾದ ಶ್ವೇತಾ ಹಾರ್ತ್ಯಾರು, ವಿಜಯ ಗೌಡ ಅಧ್ಯಾಪಕರು, ಉಪಸ್ಥಿತರಿದ್ದರು.

ಅನ್ನಛತ್ರ ಸ್ಥಳದಾನಿ ಮುರಳಿ ಗೌಡ ಹಾರ್ತ್ಯಾರು, ವಾಹನ ಪಾರ್ಕಿಂಗ್ ಸ್ಥಳದಾನಿ ಶೀನಪ್ಪ ಗೌಡ ಹಾರ್ತ್ಯಾರು, ಅನ್ನಛತ್ರ ರಸ್ತೆಯ ಸ್ಥಳದಾನಿ ಅನುವಂಶೀಯ ಆಡಳಿಯ ಮೊಕ್ತೇಸರರಾದ ಕುಕ್ಕಪ್ಪ ಗೌಡ ಇವರುಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.
ಶ್ರೀನಿವಾಸ್ ಬಾಲಂಪಾಡಿ ಸ್ವಾಗತಿಸಿ, ಅಧ್ಯಾಪಕರಾದ ಮಹೇಶ್ ಕಾರ್ಯಕ್ರಮ ನಿರ್ವಹಿಸಿ, ಚಂದ್ರಶೇಖರ್ ಸಾಲಿಯಾನ್
ಧನ್ಯವಾದವಿತ್ತರು.
ಶ್ರೀನಿವಾಸ ಗೌಡ ಬಾಲಂಪಾಡಿ ಕಾರ್ಯಕ್ರಮ ನಿರ್ವಹಿಸಿದರು.

Related posts

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ನೆರಿಯ ಸುಂದರ ಮಲೆಕುಡಿಯ ಅವರ ಕೊಲೆ ಯತ್ನ ಪ್ರಕರಣ: ನ್ಯಾಯಾಲಯದ ತೀರ್ಪು ಸ್ವಾಗತಾರ್ಹ; ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಬೆಳ್ತಂಗಡಿ ತಾಲೂಕು ಘಟಕ

Suddi Udaya

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಮೂರ್ತೆದಾರ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು

Suddi Udaya

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya
error: Content is protected !!