23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡಬಿದ್ರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇವರ ಸಹಭಾಗಿತ್ವದಲ್ಲಿ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ಪ್ರತಿಭಾ ಕಲೋತ್ಸವ ಮತ್ತು ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆಯು ಆಳ್ವಾಸ್ ಶಿಕ್ಷಣ ಸಂಸ್ಥೆ ವಿದ್ಯಾಗಿರಿ ಮೂಡಬಿದ್ರೆ ಮತ್ತು ಸ್ವರಾಜ್ಯ ಮೈದಾನ ಮೂಡಬಿದ್ರೆಯಲ್ಲಿ ನಡೆಯಿತು.

ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ವಿದ್ಯಾರ್ಥಿನಿಗಳಾದ ಅಭಿಜ್ಞಾ 6 ನೇ ತರಗತಿ, ಯಶ್ವಿ 7 ನೇ ತರಗತಿ, ಕಾವ್ಯಶ್ರೀ 7 ನೇ ತರಗತಿ, ಸಾದ್ವಿ 7 ನೇ ತರಗತಿ, ಪವೀಕ್ಷ 8 ನೇ ತರಗತಿ, ದೀಕ್ಷಿತ 8 ನೇ ತರಗತಿ, ಕನಿಷ್ಕ 8ನೇ ತರಗತಿ, ಸಹನಾ 9 ನೇ ತರಗತಿ, ನಿಧಿ 9 ನೇ ತರಗತಿ, ಕೃತಿ 9 ನೇ ತರಗತಿ, ಪೂಜಿತ 9 ನೇ ತರಗತಿ, ನೇಹಾ 9 ನೇ ತರಗತಿ, ಹುನೈದಾ 10 ನೇ ತರಗತಿ.

ಇವರಲ್ಲಿ ಪವೀಕ್ಷಾ ಗುಂಡೆಸೆತ ಸ್ಪರ್ಧೆಯಲ್ಲಿ ದ್ವಿತೀಯ ಹಾಗೂ ಕೃತಿ ಜಾವಲಿನ್ ಎಸೆತದಲ್ಲಿ ತೃತೀಯ ಬಹುಮಾನ ಗಳಿಸಿದ ಶಾಲೆಗೆ ಕೀರ್ತಿ ತಂದಿರುತ್ತಾರೆ.

Related posts

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಎಸ್.ಡಿ.ಪಿಐ ಕುವೆಟ್ಟು ಗ್ರಾಮ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya

ಮಹಿಳಾ ಶ್ರಮಿಕರ ಸಂಗಮ – 2026 ಕಾರ್ಯಕ್ರಮ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಕೊಡುಗೆ

Suddi Udaya
error: Content is protected !!