35.1 C
ಪುತ್ತೂರು, ಬೆಳ್ತಂಗಡಿ
April 11, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

ಬಳಂಜ: ನಾಲ್ಕೂರು ಶ್ರೀ ಮಾತಾ ಇವರ ನೇತೃತ್ವದಲ್ಲಿ ಖ್ಯಾತ ಕಂಬಳ ಓಟಗಾರರು ದಿ| ರಮಾನಂದ ಪೂಜಾರಿ ಯೈಕುರಿ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಜ.11 ರಂದು ಬಳಂಜ ಕೊಡಮಣಿತ್ತಾಯ ದೈವದ ಆವರಣದಲ್ಲಿ ಸಂಜೆ 7 ರಿಂದ ನಡೆಯಲಿದೆ.

ಕ್ರೀಡಾಂಗಣ ಉದ್ಘಾಟನೆಯನ್ನು ಗುರುವಾಯನಕೆರೆ ನಿಸರ್ಗ ಕರ್ಟನ್ಸ್ ಮಾಲಕ ನಾಗೇಶ್ ಕೋಟ್ಯಾನ್ ಬರಾಯ ನೆರವೇರಿಸಲಿದ್ದಾರೆ.

ಸಮಾರಂಭದ ಉದ್ಘಾಟನೆಯನ್ನು ವಿಜಯ ಪೂಜಾರಿ ಯೈಕುರಿ ನೆರವೇರಿಸಲಿದ್ದು,ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಉದ್ಯೋಗಿ ಪ್ರವೀಣ್ ಕುಮಾರ್ ಎಚ್.ಎಸ್ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಭಾರತೀಯ ಸೇನೆಗೆ ಆಯ್ಕೆಯಾದ ಬಳಂಜದ ಯುವಕ ಮನೋಹರ್ ಪೂಜಾರಿ ಕೆಂಪುಂರ್ಜ ರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಯುವಶಕ್ತಿ ನಾಲ್ಕೂರು- ಟೀಮ್ ಯುವಶಕ್ತಿ, ಎನ್..ಕೆ ಅಟ್ಯಾಕರ್ಸ್- ನೀಲಯ್ಯ ಕಾವೋಡಿ, ಎಸ್.ವಿಎಸ್ ಬಳಂಜ- ಸತೀಶ್ ದೇವಾಡಿಗ, ಕೋಟಿ ಚೆನ್ನಯ್ಯ- ರವೀಂದ್ರ ಡಿ. ಅಮೀನ್, ಶುಭೋದಯ ಸಾವ್ಯ-ವಿನೀತ್ ಕೋಟ್ಯಾನ್, ಭಜರಂಗಿ ಬಾಯ್ಸ್-ಸ್ವಸ್ತಿಕ್ ಆರ್ಯ, ಶ್ರೀ ವಿಷ್ಣು ಕಟ್ಟೆ-ಕಾಸಿಂ ಕಟ್ಟೆ, ಧರ್ಮ ಶಾಸ್ತ ಮಲೆಬೆಟ್ಟು- ಗಿರೀಶ್ ಮಲೆಬೆಟ್ಟು, ಶಿವ ಪ್ರೆಂಡ್ಸ್ ಸೂರ್ಯ -ದಿಕ್ಷೀತ್ ಸೂರ್ಯ, ಸಂಗಮ್ ಪ್ರೆಂಡ್ಸ್ -ರಾಜ್ ಕಿಶನ್ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದೆ.

ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಪ್ರಥಮ 10000/- ನಗದು ಮತ್ತು ಶ್ರೀ ಮಾತಾ ಟ್ರೋಫಿ, ದ್ವಿತೀಯ 6000/- ನಗದು ಮತ್ತು ಶ್ರೀ ಮಾತಾ ಟ್ರೋಫಿ, ತೃತೀಯ 3000/- ನಗದು ಮತ್ತು ಶ್ರೀ ಮಾತಾ ಟ್ರೋಫಿ, ಚತುರ್ಥ 3000/- ನಗದು ಮತ್ತು ಶ್ರೀ ಮಾತಾ ಟ್ರೋಫಿ ಸಿಗಲಿದೆ ಎಂದು ಶ್ರೀಮಾತ ನಾಲ್ಕೂರು ಸಂಘಟನೆಯ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!