23.2 C
ಪುತ್ತೂರು, ಬೆಳ್ತಂಗಡಿ
May 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

ಬೆಳ್ತಂಗಡಿ: ನಾಪತ್ತೆಯಾಗಿದ್ದ ನೆಲ್ಲಿಕಾರಿನ ಮುಸ್ಲಿಂ ಯುವತಿಯು ತಾನು ಪ್ರೀತಿಸುತ್ತಿದ್ದ ಪಟ್ರಮೆಯ ಹಿಂದೂ ಯುವಕನೊಂದಿಗೆ ದೇವಸ್ಥಾನದಲ್ಲಿ ವಿವಾಹವಾಗಿರುವ ಘಟನೆ ನಡೆದಿದೆ.

ನೆಲ್ಲಿಕಾರಿನ ಯುವತಿ ನಾಪತ್ತೆಯಾದ ಬಗ್ಗೆ ಯುವತಿ ಮನೆಯವರು ಮೂಡಬಿದ್ರೆಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ನಾಪತ್ತೆಯಾಗಿದ್ದ ಯುವತಿ ಹಾಗೂ ಧರ್ಮಸ್ಥಳ ಸಮೀಪದ ಪಟ್ರಮೆಯ ಹರೀಶ್ ಎಂಬ ಯುವಕನ ನಡುವೆ ಕಳೆದ ಒಂದು ವರ್ಷದಿಂದ ಫೇಸ್‌ಬುಕ್ ಮೂಲಕ ಪರಿಚಯವಾಗಿ ಮುಂದೆ ಅವರಿಬ್ಬರ ನಡುವೆ ಪ್ರೇಮಾಂಕುರವಾಗಲು ಕಾರಣವಾಗಿತ್ತು. ಇಬ್ಬರು ವಿವಾಹವಾಗಲು ನಿರ್ಧಾರಕ್ಕೆ ಬಂದಿದ್ದರು. ಈ ಹಿನ್ನಲೆಯಲ್ಲಿ ಯುವತಿ ಮನೆಮಂದಿಗೂ ತಿಳಿಸದೇ ಯುವಕನ ಸೂಚನೆಯಂತೆ ನೇರವಾಗಿ ಬೆಳ್ತಂಗಡಿಗೆ ಬಂದಿದ್ದರು.

ದೇವಸ್ಥಾನದಲ್ಲಿ ಇಬ್ಬರು ಹಾರ ಬದಲಾಯಿಸಿಕೊಂಡು ಮಾಂಗಲ್ಯಧಾರಣೆ ಮಾಡಿದ್ದಾರೆ. ಮುಸ್ಲಿಂ ಯುವತಿ ತನ್ನ ಇಚ್ಚೆಯಂತೆ ಹಿಂದು ಸಂಪ್ರದಾಯ ಪ್ರಕಾರ ಹಿಂದು ಯುವಕನೊಂದಿಗೆ ವಿವಾಹವಾಗಿದ್ದಳು. ನವದಂಪತಿ ನೇರವಾಗಿ ಬೆಳ್ತಂಗಡಿ ವಿವಾಹ ನೊಂದಾವಣಾ ಕಚೇರಿಗೆ ತೆರಳಿ, ಹಿಂದು ವಿವಾಹ ಕಾಯಿದೆಯ ಪ್ರಕಾರ ವಿವಾಹ ನೊಂದಾವಣೆಗೆ ಅರ್ಜಿ ಸಲ್ಲಿಸಿದ್ದಾರೆ.

ಯುವತಿ ನಾಪತ್ತೆ ಪ್ರಕರಣ ಕುರಿತು ಮೂಡುಬಿದಿರೆ ಪೊಲೀಸರು ತನಿಖೆ ಆರಂಭಿಸಿದ್ದರು. ಅದೇ ಸಂದರ್ಭದಲ್ಲಿ ಇವರಿಬ್ಬರು ವಿವಾಹವಾಗಿ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದರು. ಈ ವಿಚಾರವು ಮೂಡಬಿದ್ರೆಯ ಪೊಲೀಸರಿಗೆ ತಿಳಿಯುತ್ತಿದ್ದಂತೆ ಆಕೆಯ ಮನೆಮಂದಿಯನ್ನು ಠಾಣೆಗೆ ಕರೆಯಿಸಿ ನಡೆದಿರುವ ಬೆಳವಣಿಗೆ ಹಾಗೂ ವಿವಾಹವಾದ ಫೋಟೋಗಳನ್ನು ತೋರ್ಪಡಿಸಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ

Suddi Udaya

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!