24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

ಬೆಳ್ತಂಗಡಿ: ನಾಪತ್ತೆಯಾಗಿದ್ದ ನೆಲ್ಲಿಕಾರಿನ ಮುಸ್ಲಿಂ ಯುವತಿಯು ತಾನು ಪ್ರೀತಿಸುತ್ತಿದ್ದ ಪಟ್ರಮೆಯ ಹಿಂದೂ ಯುವಕನೊಂದಿಗೆ ದೇವಸ್ಥಾನದಲ್ಲಿ ವಿವಾಹವಾಗಿರುವ ಘಟನೆ ನಡೆದಿದೆ.

ನೆಲ್ಲಿಕಾರಿನ ಯುವತಿ ನಾಪತ್ತೆಯಾದ ಬಗ್ಗೆ ಯುವತಿ ಮನೆಯವರು ಮೂಡಬಿದ್ರೆಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ನಾಪತ್ತೆಯಾಗಿದ್ದ ಯುವತಿ ಹಾಗೂ ಧರ್ಮಸ್ಥಳ ಸಮೀಪದ ಪಟ್ರಮೆಯ ಹರೀಶ್ ಎಂಬ ಯುವಕನ ನಡುವೆ ಕಳೆದ ಒಂದು ವರ್ಷದಿಂದ ಫೇಸ್‌ಬುಕ್ ಮೂಲಕ ಪರಿಚಯವಾಗಿ ಮುಂದೆ ಅವರಿಬ್ಬರ ನಡುವೆ ಪ್ರೇಮಾಂಕುರವಾಗಲು ಕಾರಣವಾಗಿತ್ತು. ಇಬ್ಬರು ವಿವಾಹವಾಗಲು ನಿರ್ಧಾರಕ್ಕೆ ಬಂದಿದ್ದರು. ಈ ಹಿನ್ನಲೆಯಲ್ಲಿ ಯುವತಿ ಮನೆಮಂದಿಗೂ ತಿಳಿಸದೇ ಯುವಕನ ಸೂಚನೆಯಂತೆ ನೇರವಾಗಿ ಬೆಳ್ತಂಗಡಿಗೆ ಬಂದಿದ್ದರು.

ದೇವಸ್ಥಾನದಲ್ಲಿ ಇಬ್ಬರು ಹಾರ ಬದಲಾಯಿಸಿಕೊಂಡು ಮಾಂಗಲ್ಯಧಾರಣೆ ಮಾಡಿದ್ದಾರೆ. ಮುಸ್ಲಿಂ ಯುವತಿ ತನ್ನ ಇಚ್ಚೆಯಂತೆ ಹಿಂದು ಸಂಪ್ರದಾಯ ಪ್ರಕಾರ ಹಿಂದು ಯುವಕನೊಂದಿಗೆ ವಿವಾಹವಾಗಿದ್ದಳು. ನವದಂಪತಿ ನೇರವಾಗಿ ಬೆಳ್ತಂಗಡಿ ವಿವಾಹ ನೊಂದಾವಣಾ ಕಚೇರಿಗೆ ತೆರಳಿ, ಹಿಂದು ವಿವಾಹ ಕಾಯಿದೆಯ ಪ್ರಕಾರ ವಿವಾಹ ನೊಂದಾವಣೆಗೆ ಅರ್ಜಿ ಸಲ್ಲಿಸಿದ್ದಾರೆ.

ಯುವತಿ ನಾಪತ್ತೆ ಪ್ರಕರಣ ಕುರಿತು ಮೂಡುಬಿದಿರೆ ಪೊಲೀಸರು ತನಿಖೆ ಆರಂಭಿಸಿದ್ದರು. ಅದೇ ಸಂದರ್ಭದಲ್ಲಿ ಇವರಿಬ್ಬರು ವಿವಾಹವಾಗಿ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದರು. ಈ ವಿಚಾರವು ಮೂಡಬಿದ್ರೆಯ ಪೊಲೀಸರಿಗೆ ತಿಳಿಯುತ್ತಿದ್ದಂತೆ ಆಕೆಯ ಮನೆಮಂದಿಯನ್ನು ಠಾಣೆಗೆ ಕರೆಯಿಸಿ ನಡೆದಿರುವ ಬೆಳವಣಿಗೆ ಹಾಗೂ ವಿವಾಹವಾದ ಫೋಟೋಗಳನ್ನು ತೋರ್ಪಡಿಸಿದ್ದಾರೆ.

Related posts

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಆರಂಬೋಡಿ ಒಕ್ಕೂಟದವರಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!