31.2 C
ಪುತ್ತೂರು, ಬೆಳ್ತಂಗಡಿ
April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

ಬೆಳ್ತಂಗಡಿ: ನಾಪತ್ತೆಯಾಗಿದ್ದ ನೆಲ್ಲಿಕಾರಿನ ಮುಸ್ಲಿಂ ಯುವತಿಯು ತಾನು ಪ್ರೀತಿಸುತ್ತಿದ್ದ ಪಟ್ರಮೆಯ ಹಿಂದೂ ಯುವಕನೊಂದಿಗೆ ದೇವಸ್ಥಾನದಲ್ಲಿ ವಿವಾಹವಾಗಿರುವ ಘಟನೆ ನಡೆದಿದೆ.

ನೆಲ್ಲಿಕಾರಿನ ಯುವತಿ ನಾಪತ್ತೆಯಾದ ಬಗ್ಗೆ ಯುವತಿ ಮನೆಯವರು ಮೂಡಬಿದ್ರೆಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ನಾಪತ್ತೆಯಾಗಿದ್ದ ಯುವತಿ ಹಾಗೂ ಧರ್ಮಸ್ಥಳ ಸಮೀಪದ ಪಟ್ರಮೆಯ ಹರೀಶ್ ಎಂಬ ಯುವಕನ ನಡುವೆ ಕಳೆದ ಒಂದು ವರ್ಷದಿಂದ ಫೇಸ್‌ಬುಕ್ ಮೂಲಕ ಪರಿಚಯವಾಗಿ ಮುಂದೆ ಅವರಿಬ್ಬರ ನಡುವೆ ಪ್ರೇಮಾಂಕುರವಾಗಲು ಕಾರಣವಾಗಿತ್ತು. ಇಬ್ಬರು ವಿವಾಹವಾಗಲು ನಿರ್ಧಾರಕ್ಕೆ ಬಂದಿದ್ದರು. ಈ ಹಿನ್ನಲೆಯಲ್ಲಿ ಯುವತಿ ಮನೆಮಂದಿಗೂ ತಿಳಿಸದೇ ಯುವಕನ ಸೂಚನೆಯಂತೆ ನೇರವಾಗಿ ಬೆಳ್ತಂಗಡಿಗೆ ಬಂದಿದ್ದರು.

ದೇವಸ್ಥಾನದಲ್ಲಿ ಇಬ್ಬರು ಹಾರ ಬದಲಾಯಿಸಿಕೊಂಡು ಮಾಂಗಲ್ಯಧಾರಣೆ ಮಾಡಿದ್ದಾರೆ. ಮುಸ್ಲಿಂ ಯುವತಿ ತನ್ನ ಇಚ್ಚೆಯಂತೆ ಹಿಂದು ಸಂಪ್ರದಾಯ ಪ್ರಕಾರ ಹಿಂದು ಯುವಕನೊಂದಿಗೆ ವಿವಾಹವಾಗಿದ್ದಳು. ನವದಂಪತಿ ನೇರವಾಗಿ ಬೆಳ್ತಂಗಡಿ ವಿವಾಹ ನೊಂದಾವಣಾ ಕಚೇರಿಗೆ ತೆರಳಿ, ಹಿಂದು ವಿವಾಹ ಕಾಯಿದೆಯ ಪ್ರಕಾರ ವಿವಾಹ ನೊಂದಾವಣೆಗೆ ಅರ್ಜಿ ಸಲ್ಲಿಸಿದ್ದಾರೆ.

ಯುವತಿ ನಾಪತ್ತೆ ಪ್ರಕರಣ ಕುರಿತು ಮೂಡುಬಿದಿರೆ ಪೊಲೀಸರು ತನಿಖೆ ಆರಂಭಿಸಿದ್ದರು. ಅದೇ ಸಂದರ್ಭದಲ್ಲಿ ಇವರಿಬ್ಬರು ವಿವಾಹವಾಗಿ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದರು. ಈ ವಿಚಾರವು ಮೂಡಬಿದ್ರೆಯ ಪೊಲೀಸರಿಗೆ ತಿಳಿಯುತ್ತಿದ್ದಂತೆ ಆಕೆಯ ಮನೆಮಂದಿಯನ್ನು ಠಾಣೆಗೆ ಕರೆಯಿಸಿ ನಡೆದಿರುವ ಬೆಳವಣಿಗೆ ಹಾಗೂ ವಿವಾಹವಾದ ಫೋಟೋಗಳನ್ನು ತೋರ್ಪಡಿಸಿದ್ದಾರೆ.

Related posts

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya

“ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ ಜೆಸಿಐ ಭಾರತದಿಂದ ಬೆಳ್ತಂಗಡಿ ಜೆಸಿಐ ಗೆ ವಿಶೇಷ ಮನ್ನಣೆ

Suddi Udaya

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!