30.7 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

ಬೆಳ್ತಂಗಡಿ: ನಾಪತ್ತೆಯಾಗಿದ್ದ ನೆಲ್ಲಿಕಾರಿನ ಮುಸ್ಲಿಂ ಯುವತಿಯು ತಾನು ಪ್ರೀತಿಸುತ್ತಿದ್ದ ಪಟ್ರಮೆಯ ಹಿಂದೂ ಯುವಕನೊಂದಿಗೆ ದೇವಸ್ಥಾನದಲ್ಲಿ ವಿವಾಹವಾಗಿರುವ ಘಟನೆ ನಡೆದಿದೆ.

ನೆಲ್ಲಿಕಾರಿನ ಯುವತಿ ನಾಪತ್ತೆಯಾದ ಬಗ್ಗೆ ಯುವತಿ ಮನೆಯವರು ಮೂಡಬಿದ್ರೆಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ನಾಪತ್ತೆಯಾಗಿದ್ದ ಯುವತಿ ಹಾಗೂ ಧರ್ಮಸ್ಥಳ ಸಮೀಪದ ಪಟ್ರಮೆಯ ಹರೀಶ್ ಎಂಬ ಯುವಕನ ನಡುವೆ ಕಳೆದ ಒಂದು ವರ್ಷದಿಂದ ಫೇಸ್‌ಬುಕ್ ಮೂಲಕ ಪರಿಚಯವಾಗಿ ಮುಂದೆ ಅವರಿಬ್ಬರ ನಡುವೆ ಪ್ರೇಮಾಂಕುರವಾಗಲು ಕಾರಣವಾಗಿತ್ತು. ಇಬ್ಬರು ವಿವಾಹವಾಗಲು ನಿರ್ಧಾರಕ್ಕೆ ಬಂದಿದ್ದರು. ಈ ಹಿನ್ನಲೆಯಲ್ಲಿ ಯುವತಿ ಮನೆಮಂದಿಗೂ ತಿಳಿಸದೇ ಯುವಕನ ಸೂಚನೆಯಂತೆ ನೇರವಾಗಿ ಬೆಳ್ತಂಗಡಿಗೆ ಬಂದಿದ್ದರು.

ದೇವಸ್ಥಾನದಲ್ಲಿ ಇಬ್ಬರು ಹಾರ ಬದಲಾಯಿಸಿಕೊಂಡು ಮಾಂಗಲ್ಯಧಾರಣೆ ಮಾಡಿದ್ದಾರೆ. ಮುಸ್ಲಿಂ ಯುವತಿ ತನ್ನ ಇಚ್ಚೆಯಂತೆ ಹಿಂದು ಸಂಪ್ರದಾಯ ಪ್ರಕಾರ ಹಿಂದು ಯುವಕನೊಂದಿಗೆ ವಿವಾಹವಾಗಿದ್ದಳು. ನವದಂಪತಿ ನೇರವಾಗಿ ಬೆಳ್ತಂಗಡಿ ವಿವಾಹ ನೊಂದಾವಣಾ ಕಚೇರಿಗೆ ತೆರಳಿ, ಹಿಂದು ವಿವಾಹ ಕಾಯಿದೆಯ ಪ್ರಕಾರ ವಿವಾಹ ನೊಂದಾವಣೆಗೆ ಅರ್ಜಿ ಸಲ್ಲಿಸಿದ್ದಾರೆ.

ಯುವತಿ ನಾಪತ್ತೆ ಪ್ರಕರಣ ಕುರಿತು ಮೂಡುಬಿದಿರೆ ಪೊಲೀಸರು ತನಿಖೆ ಆರಂಭಿಸಿದ್ದರು. ಅದೇ ಸಂದರ್ಭದಲ್ಲಿ ಇವರಿಬ್ಬರು ವಿವಾಹವಾಗಿ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದರು. ಈ ವಿಚಾರವು ಮೂಡಬಿದ್ರೆಯ ಪೊಲೀಸರಿಗೆ ತಿಳಿಯುತ್ತಿದ್ದಂತೆ ಆಕೆಯ ಮನೆಮಂದಿಯನ್ನು ಠಾಣೆಗೆ ಕರೆಯಿಸಿ ನಡೆದಿರುವ ಬೆಳವಣಿಗೆ ಹಾಗೂ ವಿವಾಹವಾದ ಫೋಟೋಗಳನ್ನು ತೋರ್ಪಡಿಸಿದ್ದಾರೆ.

Related posts

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದಿಂದ ಕೊಮೊಡೋ ವೀಲ್ ಚೈರ್ ವಿತರಣೆ

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!