26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

ಬೆಳ್ತಂಗಡಿ: ನಾಪತ್ತೆಯಾಗಿದ್ದ ನೆಲ್ಲಿಕಾರಿನ ಮುಸ್ಲಿಂ ಯುವತಿಯು ತಾನು ಪ್ರೀತಿಸುತ್ತಿದ್ದ ಪಟ್ರಮೆಯ ಹಿಂದೂ ಯುವಕನೊಂದಿಗೆ ದೇವಸ್ಥಾನದಲ್ಲಿ ವಿವಾಹವಾಗಿರುವ ಘಟನೆ ನಡೆದಿದೆ.

ನೆಲ್ಲಿಕಾರಿನ ಯುವತಿ ನಾಪತ್ತೆಯಾದ ಬಗ್ಗೆ ಯುವತಿ ಮನೆಯವರು ಮೂಡಬಿದ್ರೆಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ನಾಪತ್ತೆಯಾಗಿದ್ದ ಯುವತಿ ಹಾಗೂ ಧರ್ಮಸ್ಥಳ ಸಮೀಪದ ಪಟ್ರಮೆಯ ಹರೀಶ್ ಎಂಬ ಯುವಕನ ನಡುವೆ ಕಳೆದ ಒಂದು ವರ್ಷದಿಂದ ಫೇಸ್‌ಬುಕ್ ಮೂಲಕ ಪರಿಚಯವಾಗಿ ಮುಂದೆ ಅವರಿಬ್ಬರ ನಡುವೆ ಪ್ರೇಮಾಂಕುರವಾಗಲು ಕಾರಣವಾಗಿತ್ತು. ಇಬ್ಬರು ವಿವಾಹವಾಗಲು ನಿರ್ಧಾರಕ್ಕೆ ಬಂದಿದ್ದರು. ಈ ಹಿನ್ನಲೆಯಲ್ಲಿ ಯುವತಿ ಮನೆಮಂದಿಗೂ ತಿಳಿಸದೇ ಯುವಕನ ಸೂಚನೆಯಂತೆ ನೇರವಾಗಿ ಬೆಳ್ತಂಗಡಿಗೆ ಬಂದಿದ್ದರು.

ದೇವಸ್ಥಾನದಲ್ಲಿ ಇಬ್ಬರು ಹಾರ ಬದಲಾಯಿಸಿಕೊಂಡು ಮಾಂಗಲ್ಯಧಾರಣೆ ಮಾಡಿದ್ದಾರೆ. ಮುಸ್ಲಿಂ ಯುವತಿ ತನ್ನ ಇಚ್ಚೆಯಂತೆ ಹಿಂದು ಸಂಪ್ರದಾಯ ಪ್ರಕಾರ ಹಿಂದು ಯುವಕನೊಂದಿಗೆ ವಿವಾಹವಾಗಿದ್ದಳು. ನವದಂಪತಿ ನೇರವಾಗಿ ಬೆಳ್ತಂಗಡಿ ವಿವಾಹ ನೊಂದಾವಣಾ ಕಚೇರಿಗೆ ತೆರಳಿ, ಹಿಂದು ವಿವಾಹ ಕಾಯಿದೆಯ ಪ್ರಕಾರ ವಿವಾಹ ನೊಂದಾವಣೆಗೆ ಅರ್ಜಿ ಸಲ್ಲಿಸಿದ್ದಾರೆ.

ಯುವತಿ ನಾಪತ್ತೆ ಪ್ರಕರಣ ಕುರಿತು ಮೂಡುಬಿದಿರೆ ಪೊಲೀಸರು ತನಿಖೆ ಆರಂಭಿಸಿದ್ದರು. ಅದೇ ಸಂದರ್ಭದಲ್ಲಿ ಇವರಿಬ್ಬರು ವಿವಾಹವಾಗಿ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದರು. ಈ ವಿಚಾರವು ಮೂಡಬಿದ್ರೆಯ ಪೊಲೀಸರಿಗೆ ತಿಳಿಯುತ್ತಿದ್ದಂತೆ ಆಕೆಯ ಮನೆಮಂದಿಯನ್ನು ಠಾಣೆಗೆ ಕರೆಯಿಸಿ ನಡೆದಿರುವ ಬೆಳವಣಿಗೆ ಹಾಗೂ ವಿವಾಹವಾದ ಫೋಟೋಗಳನ್ನು ತೋರ್ಪಡಿಸಿದ್ದಾರೆ.

Related posts

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

Suddi Udaya

ಅಂತರಾಷ್ಟ್ರೀಯ ಯುವ ಶೃಂಗಸಭೆಯಲ್ಲಿ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನನ್ನು ಪ್ರತಿನಿಧಿಸಿದ ಡಾ. ವಾಜಿದ ಬಾನು

Suddi Udaya

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.157 ಕೋಟಿ ವಾರ್ಷಿಕ ವ್ಯವಹಾರ, ರೂ.61.70ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 10.25 ಡಿವಿಡೆಂಟ್

Suddi Udaya
error: Content is protected !!