37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಾರ್ಯ: ಶ್ರೀ ಮಹಾವಿಷ್ಣು ದೇವಸ್ಥಾನದ ಐದನೇ ವಾರ್ಷಿಕ ಪ್ರತಿಷ್ಠಾ ಉತ್ಸವ ಮತ್ತು ಗ್ರಾಮದೈವದ ನೇಮೋತ್ಸವವು ಫೆಬ್ರವರಿ 7ರಂದು ನಡೆಯಲಿದ್ದು ದೇವಳದ ಆವರಣದಲ್ಲಿ ಆಮಂತ್ರಣ ಪತ್ರಿಕೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ದೈವಗಳ ಗುರಿಕಾರ ಭಾಸ್ಕರ ಬಾರ್ಯ ಬಿಡುಗಡೆಗೊಳಿಸಿದರು.

ಫೆಬ್ರವರಿ 6ರಂದು ಹಸಿರು ಹೊರೆಕಾಣಿಕೆ, ಭಜನಾ ಸೇವೆ,ಮಹಾಪೂಜೆ, ಅನ್ನ ಸಂತರ್ಪಣೆ, ರಾತ್ರಿ ರಂಗಪೂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಭಕ್ತಾದಿಗಳು ಸಹಕರಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ದೇವಳದ ಅರ್ಚಕ ಗುರುಪ್ರಸಾದ ನೂರಿತ್ತಾಯ,ಆಡಳಿತ ಸೇವಾ ಟ್ರಸ್ಟಿನ ಟ್ರಸ್ಟಿಗಳಾದ ಪ್ರಶಾಂತ ಪೈ ಬಾರ್ಯ,ಶೇಷಪ್ಪ ಸಾಲಿಯನ್,ನಾರಾಯಣ ಗೌಡ ಮನೋಹರ ಶೆಟ್ಟಿ, ವಿಶ್ವನಾಥ ಗೌಡ, ರಾಮಣ್ಣಗೌಡ,ಭಾಸ್ಕರ ಮಜಿಕುಡೆ, ವಿದ್ಯಾ ಪ್ರಭಾಕರ ನೂರಿತ್ತಾಯ, ವಿಜಯಲಕ್ಷ್ಮಿ, ನವೀನ,ವಾರಿಣಿ ಗುರುಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya
error: Content is protected !!