29.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡಬಿದ್ರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇವರ ಸಹಭಾಗಿತ್ವದಲ್ಲಿ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ಪ್ರತಿಭಾ ಕಲೋತ್ಸವ ಮತ್ತು ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆಯು ಆಳ್ವಾಸ್ ಶಿಕ್ಷಣ ಸಂಸ್ಥೆ ವಿದ್ಯಾಗಿರಿ ಮೂಡಬಿದ್ರೆ ಮತ್ತು ಸ್ವರಾಜ್ಯ ಮೈದಾನ ಮೂಡಬಿದ್ರೆಯಲ್ಲಿ ನಡೆಯಿತು.

ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ವಿದ್ಯಾರ್ಥಿನಿಗಳಾದ ಅಭಿಜ್ಞಾ 6 ನೇ ತರಗತಿ, ಯಶ್ವಿ 7 ನೇ ತರಗತಿ, ಕಾವ್ಯಶ್ರೀ 7 ನೇ ತರಗತಿ, ಸಾದ್ವಿ 7 ನೇ ತರಗತಿ, ಪವೀಕ್ಷ 8 ನೇ ತರಗತಿ, ದೀಕ್ಷಿತ 8 ನೇ ತರಗತಿ, ಕನಿಷ್ಕ 8ನೇ ತರಗತಿ, ಸಹನಾ 9 ನೇ ತರಗತಿ, ನಿಧಿ 9 ನೇ ತರಗತಿ, ಕೃತಿ 9 ನೇ ತರಗತಿ, ಪೂಜಿತ 9 ನೇ ತರಗತಿ, ನೇಹಾ 9 ನೇ ತರಗತಿ, ಹುನೈದಾ 10 ನೇ ತರಗತಿ.

ಇವರಲ್ಲಿ ಪವೀಕ್ಷಾ ಗುಂಡೆಸೆತ ಸ್ಪರ್ಧೆಯಲ್ಲಿ ದ್ವಿತೀಯ ಹಾಗೂ ಕೃತಿ ಜಾವಲಿನ್ ಎಸೆತದಲ್ಲಿ ತೃತೀಯ ಬಹುಮಾನ ಗಳಿಸಿದ ಶಾಲೆಗೆ ಕೀರ್ತಿ ತಂದಿರುತ್ತಾರೆ.

Related posts

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya
error: Content is protected !!