37.3 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

ಬೆಳ್ತಂಗಡಿ: ನಾಪತ್ತೆಯಾಗಿದ್ದ ನೆಲ್ಲಿಕಾರಿನ ಮುಸ್ಲಿಂ ಯುವತಿಯು ತಾನು ಪ್ರೀತಿಸುತ್ತಿದ್ದ ಪಟ್ರಮೆಯ ಹಿಂದೂ ಯುವಕನೊಂದಿಗೆ ದೇವಸ್ಥಾನದಲ್ಲಿ ವಿವಾಹವಾಗಿರುವ ಘಟನೆ ನಡೆದಿದೆ.

ನೆಲ್ಲಿಕಾರಿನ ಯುವತಿ ನಾಪತ್ತೆಯಾದ ಬಗ್ಗೆ ಯುವತಿ ಮನೆಯವರು ಮೂಡಬಿದ್ರೆಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ನಾಪತ್ತೆಯಾಗಿದ್ದ ಯುವತಿ ಹಾಗೂ ಧರ್ಮಸ್ಥಳ ಸಮೀಪದ ಪಟ್ರಮೆಯ ಹರೀಶ್ ಎಂಬ ಯುವಕನ ನಡುವೆ ಕಳೆದ ಒಂದು ವರ್ಷದಿಂದ ಫೇಸ್‌ಬುಕ್ ಮೂಲಕ ಪರಿಚಯವಾಗಿ ಮುಂದೆ ಅವರಿಬ್ಬರ ನಡುವೆ ಪ್ರೇಮಾಂಕುರವಾಗಲು ಕಾರಣವಾಗಿತ್ತು. ಇಬ್ಬರು ವಿವಾಹವಾಗಲು ನಿರ್ಧಾರಕ್ಕೆ ಬಂದಿದ್ದರು. ಈ ಹಿನ್ನಲೆಯಲ್ಲಿ ಯುವತಿ ಮನೆಮಂದಿಗೂ ತಿಳಿಸದೇ ಯುವಕನ ಸೂಚನೆಯಂತೆ ನೇರವಾಗಿ ಬೆಳ್ತಂಗಡಿಗೆ ಬಂದಿದ್ದರು.

ದೇವಸ್ಥಾನದಲ್ಲಿ ಇಬ್ಬರು ಹಾರ ಬದಲಾಯಿಸಿಕೊಂಡು ಮಾಂಗಲ್ಯಧಾರಣೆ ಮಾಡಿದ್ದಾರೆ. ಮುಸ್ಲಿಂ ಯುವತಿ ತನ್ನ ಇಚ್ಚೆಯಂತೆ ಹಿಂದು ಸಂಪ್ರದಾಯ ಪ್ರಕಾರ ಹಿಂದು ಯುವಕನೊಂದಿಗೆ ವಿವಾಹವಾಗಿದ್ದಳು. ನವದಂಪತಿ ನೇರವಾಗಿ ಬೆಳ್ತಂಗಡಿ ವಿವಾಹ ನೊಂದಾವಣಾ ಕಚೇರಿಗೆ ತೆರಳಿ, ಹಿಂದು ವಿವಾಹ ಕಾಯಿದೆಯ ಪ್ರಕಾರ ವಿವಾಹ ನೊಂದಾವಣೆಗೆ ಅರ್ಜಿ ಸಲ್ಲಿಸಿದ್ದಾರೆ.

ಯುವತಿ ನಾಪತ್ತೆ ಪ್ರಕರಣ ಕುರಿತು ಮೂಡುಬಿದಿರೆ ಪೊಲೀಸರು ತನಿಖೆ ಆರಂಭಿಸಿದ್ದರು. ಅದೇ ಸಂದರ್ಭದಲ್ಲಿ ಇವರಿಬ್ಬರು ವಿವಾಹವಾಗಿ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದರು. ಈ ವಿಚಾರವು ಮೂಡಬಿದ್ರೆಯ ಪೊಲೀಸರಿಗೆ ತಿಳಿಯುತ್ತಿದ್ದಂತೆ ಆಕೆಯ ಮನೆಮಂದಿಯನ್ನು ಠಾಣೆಗೆ ಕರೆಯಿಸಿ ನಡೆದಿರುವ ಬೆಳವಣಿಗೆ ಹಾಗೂ ವಿವಾಹವಾದ ಫೋಟೋಗಳನ್ನು ತೋರ್ಪಡಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ ಮತ್ತು ರಂಗ ತರಬೇತಿಯ ಉದ್ಘಾಟನೆ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

Suddi Udaya

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಬಿಜೆಪಿ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಆಯ್ಕೆ

Suddi Udaya
error: Content is protected !!