July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

ಬೆಳ್ತಂಗಡಿ: ನಾಪತ್ತೆಯಾಗಿದ್ದ ನೆಲ್ಲಿಕಾರಿನ ಮುಸ್ಲಿಂ ಯುವತಿಯು ತಾನು ಪ್ರೀತಿಸುತ್ತಿದ್ದ ಪಟ್ರಮೆಯ ಹಿಂದೂ ಯುವಕನೊಂದಿಗೆ ದೇವಸ್ಥಾನದಲ್ಲಿ ವಿವಾಹವಾಗಿರುವ ಘಟನೆ ನಡೆದಿದೆ.

ನೆಲ್ಲಿಕಾರಿನ ಯುವತಿ ನಾಪತ್ತೆಯಾದ ಬಗ್ಗೆ ಯುವತಿ ಮನೆಯವರು ಮೂಡಬಿದ್ರೆಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ನಾಪತ್ತೆಯಾಗಿದ್ದ ಯುವತಿ ಹಾಗೂ ಧರ್ಮಸ್ಥಳ ಸಮೀಪದ ಪಟ್ರಮೆಯ ಹರೀಶ್ ಎಂಬ ಯುವಕನ ನಡುವೆ ಕಳೆದ ಒಂದು ವರ್ಷದಿಂದ ಫೇಸ್‌ಬುಕ್ ಮೂಲಕ ಪರಿಚಯವಾಗಿ ಮುಂದೆ ಅವರಿಬ್ಬರ ನಡುವೆ ಪ್ರೇಮಾಂಕುರವಾಗಲು ಕಾರಣವಾಗಿತ್ತು. ಇಬ್ಬರು ವಿವಾಹವಾಗಲು ನಿರ್ಧಾರಕ್ಕೆ ಬಂದಿದ್ದರು. ಈ ಹಿನ್ನಲೆಯಲ್ಲಿ ಯುವತಿ ಮನೆಮಂದಿಗೂ ತಿಳಿಸದೇ ಯುವಕನ ಸೂಚನೆಯಂತೆ ನೇರವಾಗಿ ಬೆಳ್ತಂಗಡಿಗೆ ಬಂದಿದ್ದರು.

ದೇವಸ್ಥಾನದಲ್ಲಿ ಇಬ್ಬರು ಹಾರ ಬದಲಾಯಿಸಿಕೊಂಡು ಮಾಂಗಲ್ಯಧಾರಣೆ ಮಾಡಿದ್ದಾರೆ. ಮುಸ್ಲಿಂ ಯುವತಿ ತನ್ನ ಇಚ್ಚೆಯಂತೆ ಹಿಂದು ಸಂಪ್ರದಾಯ ಪ್ರಕಾರ ಹಿಂದು ಯುವಕನೊಂದಿಗೆ ವಿವಾಹವಾಗಿದ್ದಳು. ನವದಂಪತಿ ನೇರವಾಗಿ ಬೆಳ್ತಂಗಡಿ ವಿವಾಹ ನೊಂದಾವಣಾ ಕಚೇರಿಗೆ ತೆರಳಿ, ಹಿಂದು ವಿವಾಹ ಕಾಯಿದೆಯ ಪ್ರಕಾರ ವಿವಾಹ ನೊಂದಾವಣೆಗೆ ಅರ್ಜಿ ಸಲ್ಲಿಸಿದ್ದಾರೆ.

ಯುವತಿ ನಾಪತ್ತೆ ಪ್ರಕರಣ ಕುರಿತು ಮೂಡುಬಿದಿರೆ ಪೊಲೀಸರು ತನಿಖೆ ಆರಂಭಿಸಿದ್ದರು. ಅದೇ ಸಂದರ್ಭದಲ್ಲಿ ಇವರಿಬ್ಬರು ವಿವಾಹವಾಗಿ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದರು. ಈ ವಿಚಾರವು ಮೂಡಬಿದ್ರೆಯ ಪೊಲೀಸರಿಗೆ ತಿಳಿಯುತ್ತಿದ್ದಂತೆ ಆಕೆಯ ಮನೆಮಂದಿಯನ್ನು ಠಾಣೆಗೆ ಕರೆಯಿಸಿ ನಡೆದಿರುವ ಬೆಳವಣಿಗೆ ಹಾಗೂ ವಿವಾಹವಾದ ಫೋಟೋಗಳನ್ನು ತೋರ್ಪಡಿಸಿದ್ದಾರೆ.

Related posts

ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ನೇಮಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಸ್ಸಾಂ ರಾಜ್ಯದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಭೇಟಿ

Suddi Udaya

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya

ಬೆಳಾಲು ಪ್ರಾ.ಕೃ.ಪ.ಸ.ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಆ.15: ತೆಂಕಕಾರಂದೂರು- ಕಾಪಿನಡ್ಕ ಗೆಳೆಯರ ಬಳಗ ಮತ್ತು ಶ್ರೀ ಹರಿ ಭಜನಾ ಮಂಡಳಿಯಿಂದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!