July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಾರ್ಯ: ಶ್ರೀ ಮಹಾವಿಷ್ಣು ದೇವಸ್ಥಾನದ ಐದನೇ ವಾರ್ಷಿಕ ಪ್ರತಿಷ್ಠಾ ಉತ್ಸವ ಮತ್ತು ಗ್ರಾಮದೈವದ ನೇಮೋತ್ಸವವು ಫೆಬ್ರವರಿ 7ರಂದು ನಡೆಯಲಿದ್ದು ದೇವಳದ ಆವರಣದಲ್ಲಿ ಆಮಂತ್ರಣ ಪತ್ರಿಕೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ದೈವಗಳ ಗುರಿಕಾರ ಭಾಸ್ಕರ ಬಾರ್ಯ ಬಿಡುಗಡೆಗೊಳಿಸಿದರು.

ಫೆಬ್ರವರಿ 6ರಂದು ಹಸಿರು ಹೊರೆಕಾಣಿಕೆ, ಭಜನಾ ಸೇವೆ,ಮಹಾಪೂಜೆ, ಅನ್ನ ಸಂತರ್ಪಣೆ, ರಾತ್ರಿ ರಂಗಪೂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಭಕ್ತಾದಿಗಳು ಸಹಕರಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ದೇವಳದ ಅರ್ಚಕ ಗುರುಪ್ರಸಾದ ನೂರಿತ್ತಾಯ,ಆಡಳಿತ ಸೇವಾ ಟ್ರಸ್ಟಿನ ಟ್ರಸ್ಟಿಗಳಾದ ಪ್ರಶಾಂತ ಪೈ ಬಾರ್ಯ,ಶೇಷಪ್ಪ ಸಾಲಿಯನ್,ನಾರಾಯಣ ಗೌಡ ಮನೋಹರ ಶೆಟ್ಟಿ, ವಿಶ್ವನಾಥ ಗೌಡ, ರಾಮಣ್ಣಗೌಡ,ಭಾಸ್ಕರ ಮಜಿಕುಡೆ, ವಿದ್ಯಾ ಪ್ರಭಾಕರ ನೂರಿತ್ತಾಯ, ವಿಜಯಲಕ್ಷ್ಮಿ, ನವೀನ,ವಾರಿಣಿ ಗುರುಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಸಿರಿ ಕೇಂದ್ರ ಕಛೇರಿಗೆ ಡಿ. ವೀರೇಂದ್ರ ಹೆಗ್ಗಡೆ ದಂಪತಿ ಭೇಟಿ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ಅಭಿ ಅರಿಗಾ ನೇಮಕ

Suddi Udaya
error: Content is protected !!