23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

ಬೆಳ್ತಂಗಡಿ : ಆರು ಜನ ನಕ್ಸಲರು ಶರಣಾಗತಿಯಾದ ವೇಳೆ ಅವರು ಶಸ್ತಾಸ್ತ್ರಗಳನ್ನು ಯಾಕೆ ಕೊಟ್ಟಿಲ್ಲ. ಅವುಗಳು ಎಲ್ಲಿ ಹೋದವು ಎಂಬ ಪ್ರಶ್ನೆಗಳು ಉದ್ಭವವಾಗಿದ್ದವು. ಇದೀಗ ನಕ್ಸಲರ ಗನ್ ಗಳು ಪತ್ತೆಯಾಗಿವೆ.

ಜಯಪುರ ಸಮೀಪದ ಕಿತ್ತಲೆಗಂಡಿ ಕಾಡಿನಲ್ಲಿ ನಕ್ಸಲರು ಬಳಸುತ್ತಿದ್ದ ಶಸ್ತಾಸ್ತ್ರಗಳು ಮಣ್ಣಿನಡಿ ಹೂತಿಟ್ಟಿದ್ದು ಪತ್ತೆಯಾಗಿವೆ. ಒಂದು ಎಕೆ 56 ,ಮೂರು 303 ಬಂದೂಕು, ಒಂದು ಸಿಂಗಲ್ ಬ್ಯಾರಲ್ ಬಂದೂಕು, ಒಂದು ಪಿಸ್ತೂಲ್ ಹಾಗೂ 176 ಜೀವಂತ ಮದ್ದು ಗುಂಡುಗಳು ಪತ್ತೆಯಾಗಿವೆ.

ಆದರೆ ಗನ್ ಗಳು ಯಾರದ್ದು ಎಂದು ಪತ್ತೆಯಾಗಿಲ್ಲ. ನಕ್ಸಲೆರದ್ದೇನಾ ಎಂದು ತನಿಖೆಯಿಂದ ಗೊತ್ತಾಗಬೇಕಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ‌ ಠಾಣಾ ವ್ಯಾಪ್ತಿಯಲ್ಲಿ ಗನ್ ಗಳು ಪತ್ತೆಯಾಗಿವೆ. ಕೊಪ್ಪ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Related posts

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya
error: Content is protected !!