23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಬೆಳ್ತಂಗಡಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

ನಾರಾವಿ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಾರಾವಿ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ 8 ಅಭ್ಯರ್ಥಿಗಳು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದ್ದಾರೆ.
ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳು 4 ಸ್ಥಾನಗಳನ್ನು ಪಡೆದುಕೊಂಡಿದ್ದಾರೆ.

ಬಿಜೆಪಿ ನಾಯಕ, ನಾರಾವಿ ಸಿಎ ಬ್ಯಾಂಕಿನ ಹಾಲಿ ಅಧ್ಯಕ್ಷ ಸುಧಾಕರ ಭಂಢಾರಿ ಇವರ ನೇತೃತ್ವದ ಸಹಕಾರ ಭಾರತಿ ಬಿಜೆಪಿ ಬೆಂಬಲಿತ‌ 12 ಅಭ್ಯರ್ಥಿಗಳು ಚುನಾವಣೆಯಲ್ಲಿ ಭಾಗವಹಿಸಿದರು.

ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆದ ಚುನಾವಣೆಯು ಅತ್ಯಂತ ಜಿದ್ದಾಜಿದ್ದಿನಿಂದ ಕೂಡಿದ್ದು ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಸುಧಾಕರ ಭಂಢಾರಿ,ರಾಜೇಂದ್ರ ಕುಮಾರ್,ಸುಜಲತಾ,ಸುಪ್ರೀಯಾ,ಜಗದೀಶ್ ಹೆಗ್ಡೆ,ಪದ್ಮಶ್ರೀ, ಸದಾನಂದ ಗೌಡ,ಉಮೇಶ್ ಗೌಡ ಜಯಗಳಿಸಿದರು.ಕಾಂಗ್ರೇಸ್ ಬೆಂಬಲಿತಾ ಅಭ್ಯರ್ಥಿಗಳಾದ ಕೃಷ್ಣಪ್ಪ ಪೂಜಾರಿ,ಯಶೋಧ ಕುತ್ಲೂರು,ಶೇಖರ,ವಿಠಲ ಪೂಜಾರಿ ಜಯಗಳಿಸಿದರು.

ಕಳೆದ ಅವಧಿಯ ಅಧ್ಯಕ್ಷ ಚುನಾವಣೆಯಲ್ಲಿ ಸುಧಾಕರ ಭಂಢಾರಿ ಅತ್ಯಧಿಕ ಮತಗಳನ್ನು ಪಡೆದಿದ್ದರೆನ್ನಲಾಗಿದೆ.

ಜ. 11 ರಂದು ಚುನಾವಣೆ ನಡೆದಿದೆ. ಚುನಾವಣಾಧಿಕಾರಿಯಾಗಿ ವಿಲಾಸ್ ಸಹಕರಿಸಿದರು. ನಾರಾವಿ ಸಿಎ ಬ್ಯಾಂಕಿನ‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.ಫಲಿತಾಂಶವನ್ನು ಹೈಕೋರ್ಟ್ ಆದೇಶದ ಬಳಿಕ ಘೋಷಣೆ ಮಾಡಲಾಗುತ್ತದೆ ಎನ್ನಲಾಗಿದೆ.

Related posts

ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ

Suddi Udaya

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!