July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.1 ರಿಂದ ದ್ವಿತೀಯ ಪಿಯು ಪರೀಕ್ಷೆ ಹಾಗೂ ಮಾ.21 ರಿಂದ ಎಸೆಸೆಲ್ಸಿ ಪರೀಕ್ಷೆ; ಅಂತಿಮ ವೇಳಾಪಟ್ಟಿ ಪ್ರಕಟ

ಬೆಳ್ತಂಗಡಿ: 2025ನೇ ವರ್ಷದ ದ್ವಿತೀಯ ಪಿಯು ಮತ್ತು ಎಸೆಸೆಲ್ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಜ.10ರಂದು ಬಿಡುಗಡೆ ಮಾಡಿದೆ.

ಮಾ. 1ರಿಂದ 20ರ ವರೆಗೆ ದ್ವಿತೀಯ ಪಿಯು ಪರೀಕ್ಷೆ ಹಾಗೂ ಮಾ. 21ರಿಂದ ಎ.4ರವರೆಗೆ ಎಸೆಸೆಲ್ಸಿ ಪರೀಕ್ಷೆ ನಡೆಯಲಿದೆ. ವೇಳಾಪಟ್ಟಿಯು ಮಂಡಳಿ ವೆಬ್‌ಸೈಟ್‌ನಲ್ಲಿ https://kseab.karnataka.gov.in ಲಭ್ಯವಿದೆ. ದ್ವಿತೀಯ ಪಿಯು ಪರೀಕ್ಷೆಯು ಬೆಳಗ್ಗೆ 10 ಗಂಟೆಗೆ ಆರಂಭವಾಗಿ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ.

ದ್ವಿತೀಯ ಪಿಯು ಪರೀಕ್ಷೆ-1 ರ ವೇಳಾಪಟ್ಟಿ:

ಮಾ.1 ಕನ್ನಡ, ಅರೇಬಿಕ್,
ಮಾ.3 ಗಣಿತ, ಶಿಕ್ಷಣ ಶಾಸ್ತ್ರ ತರ್ಕಶಾಸ್ತ್ರ ವ್ಯವಹಾರ ಅಧ್ಯಯನ,
ಮಾ.4 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾ.5 ರಾಜ್ಯಶಾಸ್ತ್ರ ಸಂಖ್ಯಾಶಾಸ್ತ್ರ
ಮಾ.7 ಇತಿಹಾಸ, ಭೌತಶಾಸ್ತ್ರ,
ಮಾ.10 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ ಭೂಗರ್ಭಶಾಸ್ತ್ರ ಗೃಹ ವಿಜ್ಞಾನ,
ಮಾ.12 ಮನಃಶಾಸ್ತ್ರ ರಸಾಯನಶಾಸ್ತ್ರ ಮೂಲ ಗಣಿತ,
ಮಾ.13 ಅರ್ಥಶಾಸ್ತ್ರ
ಮಾ.15 ಆಂಗ್ಲಭಾಷೆ,
ಮಾ.17 ಭೂಗೋಳ ಶಾಸ್ತ್ರ
ಮಾ.18 ಜೀವಶಾಸ್ತ್ರ, ಸಮಾಜಶಾಸ್ತ್ರ ವಿದ್ಯುನ್ಮಾನಶಾಸ್ತ್ರ ಗಣಕ ವಿಜ್ಞಾನ,
ಮಾ.19 ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್ ,
ಮಾ.20 ಹಿಂದಿ.

ಎಸೆಸೆಲ್ಸಿ ಪರೀಕ್ಷಾ ವೇಳಾಪಟ್ಟಿ:

ಮಾ.21 ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಎನ್‌ಸಿಇಆರ್‌ಟಿ, ಸಂಸ್ಕೃತ,
ಮಾ.24 ಕೋರ್ ಸಬ್ಜೆಕ್ : ಗಣಿತ,
ಮಾ.26 ದ್ವಿತೀಯ ಭಾಷೆ: ಇಂಗ್ಲೀಷ್, ಕನ್ನಡ
ಮಾ.29 ಕೋರ್ ಸಬ್ಜೆಕ್ : ಸಮಾಜ ವಿಜ್ಞಾನ
ಎ.1 ಜೆಟಿಎಸ್ ವಿಷಯಗಳು: ಎಲೆಕ್ಟಿಕಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್, ಎಎನ್‌ಎಸ್‌ಐ ಸಿ, ಸಾಮಾನ್ಯ: ಅರ್ಥಶಾಸ್ತ್ರ
ಎ.2 ಕೋರ್ ಸಜೆಕ್ಟ್ ವಿಜ್ಞಾನ; ಸಾಮಾನ್ಯ ರಾಜ್ಯಶಾಸ್ತ್ರ ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ

ಎ.4 ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್‌ಎಸ್‌ ಕ್ಯೂಎಫ್ ವಿಷಯಗಳು: ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋ ಮೊಬೈಲ್, ಬ್ಯೂಟಿ ಆ್ಯಂಡ್ ವೆಲ್‌ ನೆಸ್, ಅಪೆರಲ್ಸ್ ಮೇಡ್ ಆಪ್ ಆ್ಯಂಡ್ ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಹಾರ್ಡ್ವೇರ್.

Related posts

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಕಟ್ಟಡ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವದಿಂದ ಕಾರ್ಮಿಕರಿಗೆ ಕೆಲಸ ಲಭಿಸದಿರುವ ಕುರಿತು ಹಾಗೂ ಹೊರರಾಜ್ಯದ ಕಾರ್ಮಿಕರನ್ನು ನೋಂದಣಿಗೊಳಿಸುವಂತೆ ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರ್, ಹಾಗೂ ಪೊಲೀಸ್ ಠಾಣೆಗೆ ಮನವಿ

Suddi Udaya

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya

ಮಚ್ಚಿನ: ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!