30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

ಬೆಳ್ತಂಗಡಿ: ಸಾಮೂಹಿಕವಾಗಿ ಭಗವಂತನ ಉಪಾಸನೆ ಮಾಡುವುದಕ್ಕೆ ಸನಾತನ ಧರ್ಮದಲ್ಲಿ ವಿಶೇಷವಾದ ಮಹತ್ವವಿದೆ. ಎಲ್ಲರೂ ಸೇರಿ, ಒಂದೇ ಮನಸ್ಸಿನಿಂದ ಸಾಮೂಹಿಕವಾಗಿ ಭಗವಂತನ ಉಪಾಸನೆ ಮಾಡುವುದರಿಂದ ಭಗವಂತನ ವಿಶೇಷ ಕೃಪೆ ನಮ್ಮ ಮೇಲೆ ಆಗುತ್ತದೆ ಮತ್ತು ಹಿಂದೂಗಳಲ್ಲಿ ಸಂಘಟನೆ ನಿರ್ಮಾಣವಾಗುತ್ತದೆ.

ಜ. 4 ಮತ್ತು 5ರಂದು ಬೆಂಗಳೂರಿನಲ್ಲಿ ಜರುಗಿದ ರಾಜ್ಯಮಟ್ಟದ ಮಂದಿರ ಮಹಾಸಂಘದ ಅಧಿವೇಶನದಲ್ಲಿ ಎಲ್ಲಾ ದೇವಸ್ಥಾನಗಳಲ್ಲಿ ವಾರದಲ್ಲಿ ಒಂದು ದಿನ ಎಲ್ಲಾ ಹಿಂದೂ ಬಾಂಧವರು ಜಾತಿ ಸಂಪ್ರದಾಯ ಎಲ್ಲವನ್ನು ಮರೆತು ದೇವಸ್ಥಾನದಲ್ಲಿ ಒಟ್ಟಿಗೆ ಸೇರಿ ಭಗವಂತನ ಸಾಮೂಹಿಕ ಮಹಾ ಆರತಿಯನ್ನು ಮಾಡಲು ನಿಶ್ಚಯಿಸಿದರು. ಇದರ ಮುಖ್ಯ ಉದ್ದೇಶವೆಂದರೆ ದೇವಸ್ಥಾನಗಳ ಸಂರಕ್ಷಣೆ, ಹಿಂದೂ ಸಮಾಜದ ಸಂಘಟನೆ ಹಾಗೂ ದೇವಸ್ಥಾನಗಳನ್ನು ಧರ್ಮ ಪ್ರಚಾರ ಕೇಂದ್ರವನ್ನಾಗಿಸುವುದು. ಈ ನಿಟ್ಟಿನಲ್ಲಿ ಮುಂಡಾಜೆಯಲ್ಲಿನ ಶ್ರೀ ಪರಶುರಾಮ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ಶುಭ ದಿನದಂದು ಸಾಮೂಹಿಕ ಆರತಿಯನ್ನು ಏರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂಗಳಿಗೆ ಧರ್ಮ ಶಿಕ್ಷಣದ ಅಗತ್ಯ, ಧರ್ಮಚರಣೆಯ ಮಹತ್ವವನ್ನು ಸನಾತನ ಸಂಸ್ಥೆಯ ಆನಂದ ಗೌಡ ಮಾರ್ಗದರ್ಶನವನ್ನು ಮಾಡಿದರು. ಉಪಸ್ಥಿತ ಎಲ್ಲಾ ಧರ್ಮ ಪ್ರೇಮಿಗಳು ಹಿಂದೂ ಧರ್ಮವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ, ನಾವೆಲ್ಲರೂ ಹಿಂದೂ ಧರ್ಮದ ರಕ್ಷಣೆಯನ್ನು ಮಾಡಲು ಕಟಿಬದ್ಧರಾಗಿದ್ದೇವೆ ಎಂದು ಪ್ರತಿಜ್ಞೆಯನ್ನು ಮಾಡಿದರು. ವೈಕುಂಠ ಏಕಾದಶಿಯ ನಿಮಿತ್ತ ಭಗವಾನ್ ಶ್ರೀ ಕೃಷ್ಣನ ನಾಮಜಪವನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಮಂದಿರ ಮಹಾಸಂಘದ ಬಾಲಕೃಷ್ಣ ಗೌಡ, ಹಿಂದೂ ಜನಜಾಗೃತಿ ಸಮಿತಿಯ ಶಶಿಧರ್ , ದೇವಸ್ಥಾನದ ಆಡಳಿತ ಮಂಡಳಿಯವರು, ಅರ್ಚಕರು, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಆಡಳಿತ ಮಂಡಳಿಯ ನಾರಾಯಣ ಪಡ್ಕೆ ಯವರು ಅಭಿನಂದಿಸಿದರು.

Related posts

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya
error: Content is protected !!