July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

ಬೆಳ್ತಂಗಡಿ: ಸಾಮೂಹಿಕವಾಗಿ ಭಗವಂತನ ಉಪಾಸನೆ ಮಾಡುವುದಕ್ಕೆ ಸನಾತನ ಧರ್ಮದಲ್ಲಿ ವಿಶೇಷವಾದ ಮಹತ್ವವಿದೆ. ಎಲ್ಲರೂ ಸೇರಿ, ಒಂದೇ ಮನಸ್ಸಿನಿಂದ ಸಾಮೂಹಿಕವಾಗಿ ಭಗವಂತನ ಉಪಾಸನೆ ಮಾಡುವುದರಿಂದ ಭಗವಂತನ ವಿಶೇಷ ಕೃಪೆ ನಮ್ಮ ಮೇಲೆ ಆಗುತ್ತದೆ ಮತ್ತು ಹಿಂದೂಗಳಲ್ಲಿ ಸಂಘಟನೆ ನಿರ್ಮಾಣವಾಗುತ್ತದೆ.

ಜ. 4 ಮತ್ತು 5ರಂದು ಬೆಂಗಳೂರಿನಲ್ಲಿ ಜರುಗಿದ ರಾಜ್ಯಮಟ್ಟದ ಮಂದಿರ ಮಹಾಸಂಘದ ಅಧಿವೇಶನದಲ್ಲಿ ಎಲ್ಲಾ ದೇವಸ್ಥಾನಗಳಲ್ಲಿ ವಾರದಲ್ಲಿ ಒಂದು ದಿನ ಎಲ್ಲಾ ಹಿಂದೂ ಬಾಂಧವರು ಜಾತಿ ಸಂಪ್ರದಾಯ ಎಲ್ಲವನ್ನು ಮರೆತು ದೇವಸ್ಥಾನದಲ್ಲಿ ಒಟ್ಟಿಗೆ ಸೇರಿ ಭಗವಂತನ ಸಾಮೂಹಿಕ ಮಹಾ ಆರತಿಯನ್ನು ಮಾಡಲು ನಿಶ್ಚಯಿಸಿದರು. ಇದರ ಮುಖ್ಯ ಉದ್ದೇಶವೆಂದರೆ ದೇವಸ್ಥಾನಗಳ ಸಂರಕ್ಷಣೆ, ಹಿಂದೂ ಸಮಾಜದ ಸಂಘಟನೆ ಹಾಗೂ ದೇವಸ್ಥಾನಗಳನ್ನು ಧರ್ಮ ಪ್ರಚಾರ ಕೇಂದ್ರವನ್ನಾಗಿಸುವುದು. ಈ ನಿಟ್ಟಿನಲ್ಲಿ ಮುಂಡಾಜೆಯಲ್ಲಿನ ಶ್ರೀ ಪರಶುರಾಮ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ಶುಭ ದಿನದಂದು ಸಾಮೂಹಿಕ ಆರತಿಯನ್ನು ಏರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂಗಳಿಗೆ ಧರ್ಮ ಶಿಕ್ಷಣದ ಅಗತ್ಯ, ಧರ್ಮಚರಣೆಯ ಮಹತ್ವವನ್ನು ಸನಾತನ ಸಂಸ್ಥೆಯ ಆನಂದ ಗೌಡ ಮಾರ್ಗದರ್ಶನವನ್ನು ಮಾಡಿದರು. ಉಪಸ್ಥಿತ ಎಲ್ಲಾ ಧರ್ಮ ಪ್ರೇಮಿಗಳು ಹಿಂದೂ ಧರ್ಮವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ, ನಾವೆಲ್ಲರೂ ಹಿಂದೂ ಧರ್ಮದ ರಕ್ಷಣೆಯನ್ನು ಮಾಡಲು ಕಟಿಬದ್ಧರಾಗಿದ್ದೇವೆ ಎಂದು ಪ್ರತಿಜ್ಞೆಯನ್ನು ಮಾಡಿದರು. ವೈಕುಂಠ ಏಕಾದಶಿಯ ನಿಮಿತ್ತ ಭಗವಾನ್ ಶ್ರೀ ಕೃಷ್ಣನ ನಾಮಜಪವನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಮಂದಿರ ಮಹಾಸಂಘದ ಬಾಲಕೃಷ್ಣ ಗೌಡ, ಹಿಂದೂ ಜನಜಾಗೃತಿ ಸಮಿತಿಯ ಶಶಿಧರ್ , ದೇವಸ್ಥಾನದ ಆಡಳಿತ ಮಂಡಳಿಯವರು, ಅರ್ಚಕರು, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಆಡಳಿತ ಮಂಡಳಿಯ ನಾರಾಯಣ ಪಡ್ಕೆ ಯವರು ಅಭಿನಂದಿಸಿದರು.

Related posts

ಶಿಶಿಲ : ಮುಚ್ಚಿರಡ್ಕ ಜಯಂತ್ ನಾಯ್ಕ್ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya
error: Content is protected !!