24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

ಉಜಿರೆ : ನಾವು ಅತ್ಯಂತ ಕಷ್ಟದ ಸಮಯದಲ್ಲಿ ಸಹ ಸಕಾರಾತ್ಮಕವಾಗಿ ಯೋಚಿಸಿ ಮುನ್ನಡೆಯಬೇಕು. ಮತ್ತು ನಾವು ಯಾರ ಜೊತೆಗೆ ಇದ್ದೇವೆ ಎನ್ನುವುದರ ಮೂಲಕ ನಮ್ಮ ಬೆಳವಣಿಗೆ ಇರುತ್ತದೆ. ನಾವು ಇನ್ಸ್ಪೈರ್ ಮತ್ತು ಮೋಟಿವೇಶನ್‌ ವ್ಯತ್ಯಾಸ ನಮಗೆ ಗೊತ್ತಿರಬೇಕು. ಪ್ರತಿಯೊಬ್ಬರಲ್ಲಿ ಸಹ ಪ್ರತಿಭೆ ಇರುತ್ತದೆ ಆದರೆ ಅದಕ್ಕೆ ಬೇರೆ ಬೇರೆ ಲೇಪನ ಮಾಡಿಕೊಂಡ ಪರಿಣಾಮ ಹೊರ ಜಗತ್ತಿಗೆ ಕಾಣುವುದಿಲ್ಲ. ಅದಕ್ಕೆ ನಮ್ಮ ಮೇಲೆ ಇರುವ ಲೇಪನಗಳನ್ನು ತೆಗೆದು ನಮ್ಮ ವ್ಯಕ್ತಿತ್ವದ ಪ್ರತಿಭೆಯನ್ನು ಹೊರೆಗೆ ತೆಗೆಯುವ ಕೆಲಸವನ್ನು ರುಡ್‌ ಸೆಟ್‌ ಸಂಸ್ಥೆ ಮಾಡುತ್ತದೆ. ನಿಮ್ಮಲ್ಲಿರುವ ದೌರ್ಬಲ್ಯ ಕಡಿಮೆ ಮಾಡಿಕೊಂಡು ಬೆಳೆಯಬೇಕು. ರುಡ್‌ ಸೆಟ್‌ ಸಂಸ್ಥೆ ಎನ್ನುವುದು ಭಾವನಾತ್ಮಕ ಸಂಬಂಧವನ್ನು ಬೆಳೆಸುವಂತಾಗಿದೆ . ಪೂಜ್ಯರ ಆಶಯ ಯುವಜನರಿಗೆ ವ್ಯವಹಾರ ಶೈಲಿಯನ್ನು ಕಲಿಸಿಕೊಡುಬೇಕು ಎನ್ನುವುದನ್ನು ರುಡ್‌ ಸೆಟ್‌ ಸಂಸ್ಥೆಯಲ್ಲಿ ಕಲಿಸುತ್ತಾರೆ. ದೇಶಾದಾದ್ಯಂತ ಲಕ್ಷಾಂತರ ಯುವಜನರ ಬದುಕನ್ನು ಬದಲಾಯಿಸಿದ ಸಂಸ್ಥೆ ಅದು ರುಡ್‌ ಸೆಟ್‌ ಸಂಸ್ಥೆ. ನೀವು ಸಹ ಮುಂದಿನ ಬದುಕಿನಲ್ಲಿ ಹೊಸ ಬದಲಾವಣೆಯೊಂದಿಗೆ ಗುರಿ ತಲುಪಿ. ಯಶಸ್ಸು ನಿಮ್ಮದಾಗಲಿ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಹಾಸ್ಟಿಟಲ್‌ನ ಮ್ಯಾನೇಜಿಂಗ್‌ ಡೈರೆಕ್ಟರ್‌ ಶ್ರೀಯುತ ಎಂ. ಜರ್ನಾಧನ್‌ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 10 ದಿನಗಳ ಕಾಲ ನಡೆದ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತರಿಸಿ ತಮ್ಮ ಅನುಭವ ಹಂಚಿಕೊಂಡು, ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ವಂದಿಸಿದರು. ವಿನುಷ್‌, ವರ್ಷಿತ್‌ ಮತ್ತು ಸಂಜಯ ಪ್ರಾರ್ಥನೆ ಮಾಡಿದರು. ಶಿಬಿರಾರ್ಥೀಗಳಾದ ಗಣೇಶ್‌ , ಸಂಜಯ, ಪ್ರಶಾಂತ್‌ ತಮ್ಮ ತರಬೇತಿಯ ಅನುಭವ ಹಂಚಿಕೊಂಡರು.

Related posts

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಶಾರದಾ ಪೂಜೆ

Suddi Udaya

ಎಸ್‌ಡಿಎಂ ಪಿಜಿ ಕಾಲೇಜಿನಲ್ಲಿ ಮಾಸ್ಟರ್ಸ್ ಫ್ಯಾಶನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya
error: Content is protected !!