25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ಮತ್ತು ಆರಿ ವರ್ಕ್ ಹಾಗೂ ಎಂಬ್ರಾಯಿಡರಿ ಎರಡು ತರಬೇತಿಯ ಸಮಾರೋಪ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ತಾಲೂಕು ಪಂಚಾಯತ್ ತರಬೇತುದಾರ ಜಯಾನಂದ ಪಿ. ಇವರು ಮಾತನಾಡಿ ಮಹಿಳೆಯರು ಇತರರಿಗೆ ಅವಲಂಬಿಸದೆ ಸ್ವಂತ ಉದ್ದಿಮೆ ಮಾಡಿದಾಗ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬಹುದು. ಪೂಜ್ಯರ ಮಾತಿನಂತೆ ನಾವು ಪದವಿ ಪಡೆದು ಇತರರ ಲೆಕ್ಕ ಬರೆಯುವ ಬದಲು ನಮ್ಮ ಲೆಕ್ಕ ನಾವೇ ಬರೆಯುವುದು ಶ್ರೇಷ್ಠ ಎಂದು. ಇದನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರಸ್ತುತ ಈ ತರಬೇತಿಗಳು ಬಹು ಬೇಡಿಕೆ ಇರುವ ಹಾಗೂ ಕಡಿಮೆ ಸಮಯದಲ್ಲಿ ಹೆಚ್ಚು ಸಂಪಾದನೆ ಮಾಡುವ ಸ್ವ ಉದ್ಯೋಗವಾಗಿದೆ ಎಂದರು.

ಇವರು ತರಬೇತಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭಹಾರೈಸಿದರು.
ಒಟ್ಟು 44 ಮಂದಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸೋಮನಾಥ್ ಕೆ, ಸಂಪನ್ಮೂಲ ವ್ಯಕ್ತಿಗಳಾದ ತುಳಸಿ ಮತ್ತು ಸೌಭಾಗ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತರಬೇತಿ ಸಂಯೋಜಕರಾದ ಜಯಶ್ರೀ ಸ್ವಾಗತಿಸಿದರು. ಅಶ್ವಿನಿ ಕಾರ್ಯಕ್ರಮ ನಿರ್ವಹಣೆ ಮಾಡಿ ಧನ್ಯವಾದ ನೀಡಿದರು.

Related posts

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

Suddi Udaya

ಜ.30: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya

ಬಾರ್ಯ ಮಂಡಲದ ಹಿಂದೂ ಸಂಗಮ

Suddi Udaya

ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿ ಖಂಡನೀಯ: ಅಭಿನಂದನ್ ಹರೀಶ್ ಕುಮಾರ್

Suddi Udaya

ಕರಾಟೆ ಚಾಂಪಿಯನ್ ಶಿಪ್: ಕೀರ್ತೇಶ್ ಗೌಡ ಕುಮಿಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya
error: Content is protected !!