September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ಮತ್ತು ಆರಿ ವರ್ಕ್ ಹಾಗೂ ಎಂಬ್ರಾಯಿಡರಿ ಎರಡು ತರಬೇತಿಯ ಸಮಾರೋಪ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ತಾಲೂಕು ಪಂಚಾಯತ್ ತರಬೇತುದಾರ ಜಯಾನಂದ ಪಿ. ಇವರು ಮಾತನಾಡಿ ಮಹಿಳೆಯರು ಇತರರಿಗೆ ಅವಲಂಬಿಸದೆ ಸ್ವಂತ ಉದ್ದಿಮೆ ಮಾಡಿದಾಗ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬಹುದು. ಪೂಜ್ಯರ ಮಾತಿನಂತೆ ನಾವು ಪದವಿ ಪಡೆದು ಇತರರ ಲೆಕ್ಕ ಬರೆಯುವ ಬದಲು ನಮ್ಮ ಲೆಕ್ಕ ನಾವೇ ಬರೆಯುವುದು ಶ್ರೇಷ್ಠ ಎಂದು. ಇದನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರಸ್ತುತ ಈ ತರಬೇತಿಗಳು ಬಹು ಬೇಡಿಕೆ ಇರುವ ಹಾಗೂ ಕಡಿಮೆ ಸಮಯದಲ್ಲಿ ಹೆಚ್ಚು ಸಂಪಾದನೆ ಮಾಡುವ ಸ್ವ ಉದ್ಯೋಗವಾಗಿದೆ ಎಂದರು.

ಇವರು ತರಬೇತಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭಹಾರೈಸಿದರು.
ಒಟ್ಟು 44 ಮಂದಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸೋಮನಾಥ್ ಕೆ, ಸಂಪನ್ಮೂಲ ವ್ಯಕ್ತಿಗಳಾದ ತುಳಸಿ ಮತ್ತು ಸೌಭಾಗ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತರಬೇತಿ ಸಂಯೋಜಕರಾದ ಜಯಶ್ರೀ ಸ್ವಾಗತಿಸಿದರು. ಅಶ್ವಿನಿ ಕಾರ್ಯಕ್ರಮ ನಿರ್ವಹಣೆ ಮಾಡಿ ಧನ್ಯವಾದ ನೀಡಿದರು.

Related posts

ಬಳoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಬಿಎನ್‌ವೈಎಸ್ ಕಾಲೇಜು : ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya

ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ ಇದರ ವತಿಯಿಂದ ಕಲ್ಲಂಗಡಿ ವಿತರಣೆ

Suddi Udaya

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!