23.5 C
ಪುತ್ತೂರು, ಬೆಳ್ತಂಗಡಿ
June 4, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

ಬೆಳ್ತಂಗಡಿ : ಆರು ಜನ ನಕ್ಸಲರು ಶರಣಾಗತಿಯಾದ ವೇಳೆ ಅವರು ಶಸ್ತಾಸ್ತ್ರಗಳನ್ನು ಯಾಕೆ ಕೊಟ್ಟಿಲ್ಲ. ಅವುಗಳು ಎಲ್ಲಿ ಹೋದವು ಎಂಬ ಪ್ರಶ್ನೆಗಳು ಉದ್ಭವವಾಗಿದ್ದವು. ಇದೀಗ ನಕ್ಸಲರ ಗನ್ ಗಳು ಪತ್ತೆಯಾಗಿವೆ.

ಜಯಪುರ ಸಮೀಪದ ಕಿತ್ತಲೆಗಂಡಿ ಕಾಡಿನಲ್ಲಿ ನಕ್ಸಲರು ಬಳಸುತ್ತಿದ್ದ ಶಸ್ತಾಸ್ತ್ರಗಳು ಮಣ್ಣಿನಡಿ ಹೂತಿಟ್ಟಿದ್ದು ಪತ್ತೆಯಾಗಿವೆ. ಒಂದು ಎಕೆ 56 ,ಮೂರು 303 ಬಂದೂಕು, ಒಂದು ಸಿಂಗಲ್ ಬ್ಯಾರಲ್ ಬಂದೂಕು, ಒಂದು ಪಿಸ್ತೂಲ್ ಹಾಗೂ 176 ಜೀವಂತ ಮದ್ದು ಗುಂಡುಗಳು ಪತ್ತೆಯಾಗಿವೆ.

ಆದರೆ ಗನ್ ಗಳು ಯಾರದ್ದು ಎಂದು ಪತ್ತೆಯಾಗಿಲ್ಲ. ನಕ್ಸಲೆರದ್ದೇನಾ ಎಂದು ತನಿಖೆಯಿಂದ ಗೊತ್ತಾಗಬೇಕಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ‌ ಠಾಣಾ ವ್ಯಾಪ್ತಿಯಲ್ಲಿ ಗನ್ ಗಳು ಪತ್ತೆಯಾಗಿವೆ. ಕೊಪ್ಪ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Related posts

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕನ್ಯಾಡಿ: ಕುರ್ಮಾಣಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya
error: Content is protected !!