23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

ಕೊಕ್ಕಡ : ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕೊಕ್ಕಡ ಇದರ ವಾರ್ಷಿಕ ಮಹಾಸಭೆಯು ಜ. 08ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಕುಸುಮ ವಹಿಸಿದ್ದರು. ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ಕಾರ್ಯಕ್ರಮವನ್ನು ಉದ್ಘಾಟಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ವ್ಯವಸ್ಥಾಪಕರು ಕೃಷಿಯೇತರ ನಿತೇಶ್ ರವರು ಕೃಷಿಯೇತರ ಚಟುವಟಿಕೆಗಳ ಬಗ್ಗೆ ಉತ್ಪದನ ಚಟುವಟಿಕೆಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ದೀಪಕ್ ರಾಜ್ ರವರು, ವಲಯ ಮೇಲ್ವಿಚಾರಕರಾದ ಕೌಶಲ್ಯ ವೀಣಾಶ್ರೀರವರು, ಒಕ್ಕೂಟದ ಸದಸ್ಯರುಗಳು ಉಪಸ್ಥಿತರಿದ್ದರು.

ಸಾಧಕಿ ಶ್ರೀಮತಿ ವಾರಿಜರವರನ್ನು ಸನ್ಮಾನಿಸಲಾಯಿತು. ಒಕ್ಕೂಟದ ವಾರ್ಷಿಕ ವರದಿಯನ್ನು ಎಮ್.ಬಿ.ಕೆ ಯಶೋದಾ ಮಂಡಿಸಿದರು. ಅಡಿಟ್ ಜಮಾ ಖರ್ಚು ವಿವರವನ್ನು ಒಕ್ಕೂಟದ ಸದಸ್ಯೆ ಅಶ್ವಿನಿ ಓದಿದರು. ಘನತ್ಯಾಜ್ಯದ ಜಮಾ ಖರ್ಚು ವಿವರವನ್ನು ಒಕ್ಕೂಟದ ಕಾರ್ಯದರ್ಶಿಯಾದ ಹೇಮಾವತಿ ಮಂಡಿಸಿದರು. ಸಂಘದ ಸದಸ್ಯರಿಗೆ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿದ್ದು ಬಹುಮಾನ ವಿತರಣೆ, ಹಾಗೂ ಅತ್ಯುತ್ತಮ ಸ್ವ ಸಹಾಯ ಸಂಘವನ್ನು ಗುರುತಿಸಲಾಯಿತು. ಕಾರ್ಯಕ್ರಮದಲ್ಲಿ ಸಂಜೀವಿನಿ ಸಂಘದ ಸದಸ್ಯೆ ತಯಾರಿಸಿದ ಅಕ್ಕಿ ರೊಟ್ಟಿ ಲಾಚಿಂಗ್ ನಡೆಯಿತು.ನಂತರ ಪದಗ್ರಹಣ ಕಾರ್ಯಕ್ರಮವನ್ನು ನಡೆಸಲಾಯಿತು.

ಹಳೆ ಸದಸ್ಯರನ್ನು ಕಿರು ಕಾಣಿಕೆ ನೀಡಿ ಬೀಳ್ಕೊಡಲಾಯಿತು .ಎಲ್ ಸಿ ಆರ್ ಪಿ ಗಾಯತ್ರಿ ಸ್ವಾಗತಿಸಿ, ಶ್ರೀಮತಿ ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು. ಎಲ್ ಸಿ ಆರ್ ಪಿ ಪವಿತ್ರರವರು ಧನ್ಯವಾದವಿತ್ತರು.

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಫೋಟೋಗ್ರಫಿ ಮತ್ತು ವಿಡೀಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

Suddi Udaya

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

Suddi Udaya

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!