ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

ಬೆಳ್ತಂಗಡಿ: ಸಾಮೂಹಿಕವಾಗಿ ಭಗವಂತನ ಉಪಾಸನೆ ಮಾಡುವುದಕ್ಕೆ ಸನಾತನ ಧರ್ಮದಲ್ಲಿ ವಿಶೇಷವಾದ ಮಹತ್ವವಿದೆ. ಎಲ್ಲರೂ ಸೇರಿ, ಒಂದೇ ಮನಸ್ಸಿನಿಂದ ಸಾಮೂಹಿಕವಾಗಿ ಭಗವಂತನ ಉಪಾಸನೆ ಮಾಡುವುದರಿಂದ ಭಗವಂತನ ವಿಶೇಷ ಕೃಪೆ ನಮ್ಮ ಮೇಲೆ ಆಗುತ್ತದೆ ಮತ್ತು ಹಿಂದೂಗಳಲ್ಲಿ ಸಂಘಟನೆ ನಿರ್ಮಾಣವಾಗುತ್ತದೆ.

ಜ. 4 ಮತ್ತು 5ರಂದು ಬೆಂಗಳೂರಿನಲ್ಲಿ ಜರುಗಿದ ರಾಜ್ಯಮಟ್ಟದ ಮಂದಿರ ಮಹಾಸಂಘದ ಅಧಿವೇಶನದಲ್ಲಿ ಎಲ್ಲಾ ದೇವಸ್ಥಾನಗಳಲ್ಲಿ ವಾರದಲ್ಲಿ ಒಂದು ದಿನ ಎಲ್ಲಾ ಹಿಂದೂ ಬಾಂಧವರು ಜಾತಿ ಸಂಪ್ರದಾಯ ಎಲ್ಲವನ್ನು ಮರೆತು ದೇವಸ್ಥಾನದಲ್ಲಿ ಒಟ್ಟಿಗೆ ಸೇರಿ ಭಗವಂತನ ಸಾಮೂಹಿಕ ಮಹಾ ಆರತಿಯನ್ನು ಮಾಡಲು ನಿಶ್ಚಯಿಸಿದರು. ಇದರ ಮುಖ್ಯ ಉದ್ದೇಶವೆಂದರೆ ದೇವಸ್ಥಾನಗಳ ಸಂರಕ್ಷಣೆ, ಹಿಂದೂ ಸಮಾಜದ ಸಂಘಟನೆ ಹಾಗೂ ದೇವಸ್ಥಾನಗಳನ್ನು ಧರ್ಮ ಪ್ರಚಾರ ಕೇಂದ್ರವನ್ನಾಗಿಸುವುದು. ಈ ನಿಟ್ಟಿನಲ್ಲಿ ಮುಂಡಾಜೆಯಲ್ಲಿನ ಶ್ರೀ ಪರಶುರಾಮ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ಶುಭ ದಿನದಂದು ಸಾಮೂಹಿಕ ಆರತಿಯನ್ನು ಏರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂಗಳಿಗೆ ಧರ್ಮ ಶಿಕ್ಷಣದ ಅಗತ್ಯ, ಧರ್ಮಚರಣೆಯ ಮಹತ್ವವನ್ನು ಸನಾತನ ಸಂಸ್ಥೆಯ ಆನಂದ ಗೌಡ ಮಾರ್ಗದರ್ಶನವನ್ನು ಮಾಡಿದರು. ಉಪಸ್ಥಿತ ಎಲ್ಲಾ ಧರ್ಮ ಪ್ರೇಮಿಗಳು ಹಿಂದೂ ಧರ್ಮವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ, ನಾವೆಲ್ಲರೂ ಹಿಂದೂ ಧರ್ಮದ ರಕ್ಷಣೆಯನ್ನು ಮಾಡಲು ಕಟಿಬದ್ಧರಾಗಿದ್ದೇವೆ ಎಂದು ಪ್ರತಿಜ್ಞೆಯನ್ನು ಮಾಡಿದರು. ವೈಕುಂಠ ಏಕಾದಶಿಯ ನಿಮಿತ್ತ ಭಗವಾನ್ ಶ್ರೀ ಕೃಷ್ಣನ ನಾಮಜಪವನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಮಂದಿರ ಮಹಾಸಂಘದ ಬಾಲಕೃಷ್ಣ ಗೌಡ, ಹಿಂದೂ ಜನಜಾಗೃತಿ ಸಮಿತಿಯ ಶಶಿಧರ್ , ದೇವಸ್ಥಾನದ ಆಡಳಿತ ಮಂಡಳಿಯವರು, ಅರ್ಚಕರು, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಆಡಳಿತ ಮಂಡಳಿಯ ನಾರಾಯಣ ಪಡ್ಕೆ ಯವರು ಅಭಿನಂದಿಸಿದರು.

Related posts

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ

Suddi Udaya

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

Suddi Udaya
error: Content is protected !!