23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

ಬೆಳ್ತಂಗಡಿ: ಸಾಮೂಹಿಕವಾಗಿ ಭಗವಂತನ ಉಪಾಸನೆ ಮಾಡುವುದಕ್ಕೆ ಸನಾತನ ಧರ್ಮದಲ್ಲಿ ವಿಶೇಷವಾದ ಮಹತ್ವವಿದೆ. ಎಲ್ಲರೂ ಸೇರಿ, ಒಂದೇ ಮನಸ್ಸಿನಿಂದ ಸಾಮೂಹಿಕವಾಗಿ ಭಗವಂತನ ಉಪಾಸನೆ ಮಾಡುವುದರಿಂದ ಭಗವಂತನ ವಿಶೇಷ ಕೃಪೆ ನಮ್ಮ ಮೇಲೆ ಆಗುತ್ತದೆ ಮತ್ತು ಹಿಂದೂಗಳಲ್ಲಿ ಸಂಘಟನೆ ನಿರ್ಮಾಣವಾಗುತ್ತದೆ.

ಜ. 4 ಮತ್ತು 5ರಂದು ಬೆಂಗಳೂರಿನಲ್ಲಿ ಜರುಗಿದ ರಾಜ್ಯಮಟ್ಟದ ಮಂದಿರ ಮಹಾಸಂಘದ ಅಧಿವೇಶನದಲ್ಲಿ ಎಲ್ಲಾ ದೇವಸ್ಥಾನಗಳಲ್ಲಿ ವಾರದಲ್ಲಿ ಒಂದು ದಿನ ಎಲ್ಲಾ ಹಿಂದೂ ಬಾಂಧವರು ಜಾತಿ ಸಂಪ್ರದಾಯ ಎಲ್ಲವನ್ನು ಮರೆತು ದೇವಸ್ಥಾನದಲ್ಲಿ ಒಟ್ಟಿಗೆ ಸೇರಿ ಭಗವಂತನ ಸಾಮೂಹಿಕ ಮಹಾ ಆರತಿಯನ್ನು ಮಾಡಲು ನಿಶ್ಚಯಿಸಿದರು. ಇದರ ಮುಖ್ಯ ಉದ್ದೇಶವೆಂದರೆ ದೇವಸ್ಥಾನಗಳ ಸಂರಕ್ಷಣೆ, ಹಿಂದೂ ಸಮಾಜದ ಸಂಘಟನೆ ಹಾಗೂ ದೇವಸ್ಥಾನಗಳನ್ನು ಧರ್ಮ ಪ್ರಚಾರ ಕೇಂದ್ರವನ್ನಾಗಿಸುವುದು. ಈ ನಿಟ್ಟಿನಲ್ಲಿ ಮುಂಡಾಜೆಯಲ್ಲಿನ ಶ್ರೀ ಪರಶುರಾಮ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ಶುಭ ದಿನದಂದು ಸಾಮೂಹಿಕ ಆರತಿಯನ್ನು ಏರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂಗಳಿಗೆ ಧರ್ಮ ಶಿಕ್ಷಣದ ಅಗತ್ಯ, ಧರ್ಮಚರಣೆಯ ಮಹತ್ವವನ್ನು ಸನಾತನ ಸಂಸ್ಥೆಯ ಆನಂದ ಗೌಡ ಮಾರ್ಗದರ್ಶನವನ್ನು ಮಾಡಿದರು. ಉಪಸ್ಥಿತ ಎಲ್ಲಾ ಧರ್ಮ ಪ್ರೇಮಿಗಳು ಹಿಂದೂ ಧರ್ಮವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ, ನಾವೆಲ್ಲರೂ ಹಿಂದೂ ಧರ್ಮದ ರಕ್ಷಣೆಯನ್ನು ಮಾಡಲು ಕಟಿಬದ್ಧರಾಗಿದ್ದೇವೆ ಎಂದು ಪ್ರತಿಜ್ಞೆಯನ್ನು ಮಾಡಿದರು. ವೈಕುಂಠ ಏಕಾದಶಿಯ ನಿಮಿತ್ತ ಭಗವಾನ್ ಶ್ರೀ ಕೃಷ್ಣನ ನಾಮಜಪವನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಮಂದಿರ ಮಹಾಸಂಘದ ಬಾಲಕೃಷ್ಣ ಗೌಡ, ಹಿಂದೂ ಜನಜಾಗೃತಿ ಸಮಿತಿಯ ಶಶಿಧರ್ , ದೇವಸ್ಥಾನದ ಆಡಳಿತ ಮಂಡಳಿಯವರು, ಅರ್ಚಕರು, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಆಡಳಿತ ಮಂಡಳಿಯ ನಾರಾಯಣ ಪಡ್ಕೆ ಯವರು ಅಭಿನಂದಿಸಿದರು.

Related posts

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

Suddi Udaya

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವಾರಂಟ್ ಜಾರಿ

Suddi Udaya

ಹೊಸಂಗಡಿ : ಗುಂಡೂರಿ ಒಕ್ಕೂಟದ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

Suddi Udaya

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

Suddi Udaya
error: Content is protected !!