22.3 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ಮತ್ತು ಆರಿ ವರ್ಕ್ ಹಾಗೂ ಎಂಬ್ರಾಯಿಡರಿ ಎರಡು ತರಬೇತಿಯ ಸಮಾರೋಪ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ತಾಲೂಕು ಪಂಚಾಯತ್ ತರಬೇತುದಾರ ಜಯಾನಂದ ಪಿ. ಇವರು ಮಾತನಾಡಿ ಮಹಿಳೆಯರು ಇತರರಿಗೆ ಅವಲಂಬಿಸದೆ ಸ್ವಂತ ಉದ್ದಿಮೆ ಮಾಡಿದಾಗ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬಹುದು. ಪೂಜ್ಯರ ಮಾತಿನಂತೆ ನಾವು ಪದವಿ ಪಡೆದು ಇತರರ ಲೆಕ್ಕ ಬರೆಯುವ ಬದಲು ನಮ್ಮ ಲೆಕ್ಕ ನಾವೇ ಬರೆಯುವುದು ಶ್ರೇಷ್ಠ ಎಂದು. ಇದನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರಸ್ತುತ ಈ ತರಬೇತಿಗಳು ಬಹು ಬೇಡಿಕೆ ಇರುವ ಹಾಗೂ ಕಡಿಮೆ ಸಮಯದಲ್ಲಿ ಹೆಚ್ಚು ಸಂಪಾದನೆ ಮಾಡುವ ಸ್ವ ಉದ್ಯೋಗವಾಗಿದೆ ಎಂದರು.

ಇವರು ತರಬೇತಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭಹಾರೈಸಿದರು.
ಒಟ್ಟು 44 ಮಂದಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸೋಮನಾಥ್ ಕೆ, ಸಂಪನ್ಮೂಲ ವ್ಯಕ್ತಿಗಳಾದ ತುಳಸಿ ಮತ್ತು ಸೌಭಾಗ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತರಬೇತಿ ಸಂಯೋಜಕರಾದ ಜಯಶ್ರೀ ಸ್ವಾಗತಿಸಿದರು. ಅಶ್ವಿನಿ ಕಾರ್ಯಕ್ರಮ ನಿರ್ವಹಣೆ ಮಾಡಿ ಧನ್ಯವಾದ ನೀಡಿದರು.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ಅಧಿಕಾರ ಸ್ವೀಕಾರ

Suddi Udaya
error: Content is protected !!