25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

ಬೆಳ್ತಂಗಡಿ : ಆರು ಜನ ನಕ್ಸಲರು ಶರಣಾಗತಿಯಾದ ವೇಳೆ ಅವರು ಶಸ್ತಾಸ್ತ್ರಗಳನ್ನು ಯಾಕೆ ಕೊಟ್ಟಿಲ್ಲ. ಅವುಗಳು ಎಲ್ಲಿ ಹೋದವು ಎಂಬ ಪ್ರಶ್ನೆಗಳು ಉದ್ಭವವಾಗಿದ್ದವು. ಇದೀಗ ನಕ್ಸಲರ ಗನ್ ಗಳು ಪತ್ತೆಯಾಗಿವೆ.

ಜಯಪುರ ಸಮೀಪದ ಕಿತ್ತಲೆಗಂಡಿ ಕಾಡಿನಲ್ಲಿ ನಕ್ಸಲರು ಬಳಸುತ್ತಿದ್ದ ಶಸ್ತಾಸ್ತ್ರಗಳು ಮಣ್ಣಿನಡಿ ಹೂತಿಟ್ಟಿದ್ದು ಪತ್ತೆಯಾಗಿವೆ. ಒಂದು ಎಕೆ 56 ,ಮೂರು 303 ಬಂದೂಕು, ಒಂದು ಸಿಂಗಲ್ ಬ್ಯಾರಲ್ ಬಂದೂಕು, ಒಂದು ಪಿಸ್ತೂಲ್ ಹಾಗೂ 176 ಜೀವಂತ ಮದ್ದು ಗುಂಡುಗಳು ಪತ್ತೆಯಾಗಿವೆ.

ಆದರೆ ಗನ್ ಗಳು ಯಾರದ್ದು ಎಂದು ಪತ್ತೆಯಾಗಿಲ್ಲ. ನಕ್ಸಲೆರದ್ದೇನಾ ಎಂದು ತನಿಖೆಯಿಂದ ಗೊತ್ತಾಗಬೇಕಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ‌ ಠಾಣಾ ವ್ಯಾಪ್ತಿಯಲ್ಲಿ ಗನ್ ಗಳು ಪತ್ತೆಯಾಗಿವೆ. ಕೊಪ್ಪ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Related posts

ಬೆಳ್ತಂಗಡಿ: ಬುದ್ಧ ಬಸವ ಅಂಬೇಡ್ಕರ್ ವಚನ ಟ್ರಸ್ಟ್ ವತಿಯಿಂದ ಕೋರೆಗಾಂವ್ ವಿಜಯೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರಾಗಿ ಸಹಕಾರ ಭಾರತಿ ಅಭ್ಯರ್ಥಿ ಉಮೇಶ್.ಎಂ.ಕೆ ಅವಿರೋಧವಾಗಿ ಆಯ್ಕೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!