24 C
ಪುತ್ತೂರು, ಬೆಳ್ತಂಗಡಿ
July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಬೆಳ್ತಂಗಡಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

ನಾರಾವಿ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಾರಾವಿ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ 8 ಅಭ್ಯರ್ಥಿಗಳು ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದ್ದಾರೆ.
ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳು 4 ಸ್ಥಾನಗಳನ್ನು ಪಡೆದುಕೊಂಡಿದ್ದಾರೆ.

ಬಿಜೆಪಿ ನಾಯಕ, ನಾರಾವಿ ಸಿಎ ಬ್ಯಾಂಕಿನ ಹಾಲಿ ಅಧ್ಯಕ್ಷ ಸುಧಾಕರ ಭಂಢಾರಿ ಇವರ ನೇತೃತ್ವದ ಸಹಕಾರ ಭಾರತಿ ಬಿಜೆಪಿ ಬೆಂಬಲಿತ‌ 12 ಅಭ್ಯರ್ಥಿಗಳು ಚುನಾವಣೆಯಲ್ಲಿ ಭಾಗವಹಿಸಿದರು.

ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆದ ಚುನಾವಣೆಯು ಅತ್ಯಂತ ಜಿದ್ದಾಜಿದ್ದಿನಿಂದ ಕೂಡಿದ್ದು ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಸುಧಾಕರ ಭಂಢಾರಿ,ರಾಜೇಂದ್ರ ಕುಮಾರ್,ಸುಜಲತಾ,ಸುಪ್ರೀಯಾ,ಜಗದೀಶ್ ಹೆಗ್ಡೆ,ಪದ್ಮಶ್ರೀ, ಸದಾನಂದ ಗೌಡ,ಉಮೇಶ್ ಗೌಡ ಜಯಗಳಿಸಿದರು.ಕಾಂಗ್ರೇಸ್ ಬೆಂಬಲಿತಾ ಅಭ್ಯರ್ಥಿಗಳಾದ ಕೃಷ್ಣಪ್ಪ ಪೂಜಾರಿ,ಯಶೋಧ ಕುತ್ಲೂರು,ಶೇಖರ,ವಿಠಲ ಪೂಜಾರಿ ಜಯಗಳಿಸಿದರು.

ಕಳೆದ ಅವಧಿಯ ಅಧ್ಯಕ್ಷ ಚುನಾವಣೆಯಲ್ಲಿ ಸುಧಾಕರ ಭಂಢಾರಿ ಅತ್ಯಧಿಕ ಮತಗಳನ್ನು ಪಡೆದಿದ್ದರೆನ್ನಲಾಗಿದೆ.

ಜ. 11 ರಂದು ಚುನಾವಣೆ ನಡೆದಿದೆ. ಚುನಾವಣಾಧಿಕಾರಿಯಾಗಿ ವಿಲಾಸ್ ಸಹಕರಿಸಿದರು. ನಾರಾವಿ ಸಿಎ ಬ್ಯಾಂಕಿನ‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.ಫಲಿತಾಂಶವನ್ನು ಹೈಕೋರ್ಟ್ ಆದೇಶದ ಬಳಿಕ ಘೋಷಣೆ ಮಾಡಲಾಗುತ್ತದೆ ಎನ್ನಲಾಗಿದೆ.

Related posts

“ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ: ಸುಮಂತ್ ಕುಮಾರ್ ಜೈನ್

Suddi Udaya

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧದ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಕೊಯ್ಯೂರಿನಲ್ಲಿ ಜಾಗದ ತಕರಾರು; ಕಾರ್ಮಿಕನ ಮೇಲೆ ಹಲ್ಲೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

Suddi Udaya
error: Content is protected !!