April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

ಬೆಳ್ತಂಗಡಿ: ಸಾಮೂಹಿಕವಾಗಿ ಭಗವಂತನ ಉಪಾಸನೆ ಮಾಡುವುದಕ್ಕೆ ಸನಾತನ ಧರ್ಮದಲ್ಲಿ ವಿಶೇಷವಾದ ಮಹತ್ವವಿದೆ. ಎಲ್ಲರೂ ಸೇರಿ, ಒಂದೇ ಮನಸ್ಸಿನಿಂದ ಸಾಮೂಹಿಕವಾಗಿ ಭಗವಂತನ ಉಪಾಸನೆ ಮಾಡುವುದರಿಂದ ಭಗವಂತನ ವಿಶೇಷ ಕೃಪೆ ನಮ್ಮ ಮೇಲೆ ಆಗುತ್ತದೆ ಮತ್ತು ಹಿಂದೂಗಳಲ್ಲಿ ಸಂಘಟನೆ ನಿರ್ಮಾಣವಾಗುತ್ತದೆ.

ಜ. 4 ಮತ್ತು 5ರಂದು ಬೆಂಗಳೂರಿನಲ್ಲಿ ಜರುಗಿದ ರಾಜ್ಯಮಟ್ಟದ ಮಂದಿರ ಮಹಾಸಂಘದ ಅಧಿವೇಶನದಲ್ಲಿ ಎಲ್ಲಾ ದೇವಸ್ಥಾನಗಳಲ್ಲಿ ವಾರದಲ್ಲಿ ಒಂದು ದಿನ ಎಲ್ಲಾ ಹಿಂದೂ ಬಾಂಧವರು ಜಾತಿ ಸಂಪ್ರದಾಯ ಎಲ್ಲವನ್ನು ಮರೆತು ದೇವಸ್ಥಾನದಲ್ಲಿ ಒಟ್ಟಿಗೆ ಸೇರಿ ಭಗವಂತನ ಸಾಮೂಹಿಕ ಮಹಾ ಆರತಿಯನ್ನು ಮಾಡಲು ನಿಶ್ಚಯಿಸಿದರು. ಇದರ ಮುಖ್ಯ ಉದ್ದೇಶವೆಂದರೆ ದೇವಸ್ಥಾನಗಳ ಸಂರಕ್ಷಣೆ, ಹಿಂದೂ ಸಮಾಜದ ಸಂಘಟನೆ ಹಾಗೂ ದೇವಸ್ಥಾನಗಳನ್ನು ಧರ್ಮ ಪ್ರಚಾರ ಕೇಂದ್ರವನ್ನಾಗಿಸುವುದು. ಈ ನಿಟ್ಟಿನಲ್ಲಿ ಮುಂಡಾಜೆಯಲ್ಲಿನ ಶ್ರೀ ಪರಶುರಾಮ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ಶುಭ ದಿನದಂದು ಸಾಮೂಹಿಕ ಆರತಿಯನ್ನು ಏರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂಗಳಿಗೆ ಧರ್ಮ ಶಿಕ್ಷಣದ ಅಗತ್ಯ, ಧರ್ಮಚರಣೆಯ ಮಹತ್ವವನ್ನು ಸನಾತನ ಸಂಸ್ಥೆಯ ಆನಂದ ಗೌಡ ಮಾರ್ಗದರ್ಶನವನ್ನು ಮಾಡಿದರು. ಉಪಸ್ಥಿತ ಎಲ್ಲಾ ಧರ್ಮ ಪ್ರೇಮಿಗಳು ಹಿಂದೂ ಧರ್ಮವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ, ನಾವೆಲ್ಲರೂ ಹಿಂದೂ ಧರ್ಮದ ರಕ್ಷಣೆಯನ್ನು ಮಾಡಲು ಕಟಿಬದ್ಧರಾಗಿದ್ದೇವೆ ಎಂದು ಪ್ರತಿಜ್ಞೆಯನ್ನು ಮಾಡಿದರು. ವೈಕುಂಠ ಏಕಾದಶಿಯ ನಿಮಿತ್ತ ಭಗವಾನ್ ಶ್ರೀ ಕೃಷ್ಣನ ನಾಮಜಪವನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಮಂದಿರ ಮಹಾಸಂಘದ ಬಾಲಕೃಷ್ಣ ಗೌಡ, ಹಿಂದೂ ಜನಜಾಗೃತಿ ಸಮಿತಿಯ ಶಶಿಧರ್ , ದೇವಸ್ಥಾನದ ಆಡಳಿತ ಮಂಡಳಿಯವರು, ಅರ್ಚಕರು, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಆಡಳಿತ ಮಂಡಳಿಯ ನಾರಾಯಣ ಪಡ್ಕೆ ಯವರು ಅಭಿನಂದಿಸಿದರು.

Related posts

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

Suddi Udaya

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya
error: Content is protected !!