25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ಮತ್ತು ಆರಿ ವರ್ಕ್ ಹಾಗೂ ಎಂಬ್ರಾಯಿಡರಿ ಎರಡು ತರಬೇತಿಯ ಸಮಾರೋಪ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ತಾಲೂಕು ಪಂಚಾಯತ್ ತರಬೇತುದಾರ ಜಯಾನಂದ ಪಿ. ಇವರು ಮಾತನಾಡಿ ಮಹಿಳೆಯರು ಇತರರಿಗೆ ಅವಲಂಬಿಸದೆ ಸ್ವಂತ ಉದ್ದಿಮೆ ಮಾಡಿದಾಗ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬಹುದು. ಪೂಜ್ಯರ ಮಾತಿನಂತೆ ನಾವು ಪದವಿ ಪಡೆದು ಇತರರ ಲೆಕ್ಕ ಬರೆಯುವ ಬದಲು ನಮ್ಮ ಲೆಕ್ಕ ನಾವೇ ಬರೆಯುವುದು ಶ್ರೇಷ್ಠ ಎಂದು. ಇದನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರಸ್ತುತ ಈ ತರಬೇತಿಗಳು ಬಹು ಬೇಡಿಕೆ ಇರುವ ಹಾಗೂ ಕಡಿಮೆ ಸಮಯದಲ್ಲಿ ಹೆಚ್ಚು ಸಂಪಾದನೆ ಮಾಡುವ ಸ್ವ ಉದ್ಯೋಗವಾಗಿದೆ ಎಂದರು.

ಇವರು ತರಬೇತಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭಹಾರೈಸಿದರು.
ಒಟ್ಟು 44 ಮಂದಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸೋಮನಾಥ್ ಕೆ, ಸಂಪನ್ಮೂಲ ವ್ಯಕ್ತಿಗಳಾದ ತುಳಸಿ ಮತ್ತು ಸೌಭಾಗ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತರಬೇತಿ ಸಂಯೋಜಕರಾದ ಜಯಶ್ರೀ ಸ್ವಾಗತಿಸಿದರು. ಅಶ್ವಿನಿ ಕಾರ್ಯಕ್ರಮ ನಿರ್ವಹಣೆ ಮಾಡಿ ಧನ್ಯವಾದ ನೀಡಿದರು.

Related posts

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಬೆಂಬಲ

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya

ಕೊಯ್ಯೂರು : ಶ್ರೀ ಮಹಮ್ಮಾಯಿ ಸನ್ನಿಧಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ

Suddi Udaya
error: Content is protected !!