30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಸಂತ ಬಂಗೇರರ ಹುಟ್ಟುಹಬ್ಬ ಪ್ರಯುಕ್ತ ನಡೆಯುವ ರಕ್ತದಾನ ಮತ್ತು ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸುವಂತೆ ಪ್ರೀತಿತಾ ಬಂಗೇರ ಮನವಿ

ಬೆಳ್ತಂಗಡಿ: ಕೀರ್ತಿಶೇಷ ಮಾಜಿ ಶಾಸಕ ವಸಂತ ಬಂಗೇರರ 79 ನೇ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿ ಸಮಿತಿ ವತಿಯಿಂದ ಬೆಳ್ತಂಗಡಿಯ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ನಡೆಯುವ ಬೃಹತ್ ರಕ್ತದಾನ ಶಿಬಿರ ಮತ್ತು ಬಂಗೇರ ಬ್ರಿಗೇಡ್ ವತಿಯಿಂದ ಮದ್ದಡ್ಕದ ಬಂಡಿಮಠ ಮೈದಾನದಲ್ಲಿ ನಡೆಯಲಿರುವ ಕಬಡ್ಡಿ ಪಂದ್ಯಾಟಗಳಲ್ಲಿ ಬಂಗೇರರ ಅಭಿಮಾನಿಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ವಸಂತ ಬಂಗೇರರ ಹಿರಿಯ ಪುತ್ರಿ ಪ್ರೀತಿತಾ ಬಂಗೇರ ಮನವಿ ಮಾಡಿದ್ದಾರೆ.

ಅವರು ಅಭಿಮಾನಿ ಸಮಿತಿಯ ವತಿಯಿಂದ ನಡೆದ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಸಭೆಯಲ್ಲಿ ಸಮಿತಿ ಅಧ್ಯಕ್ಷ ಈಶ್ವರ ಭಟ್, ಕಾರ್ಯದರ್ಶಿ ಮನೋಹರ ಕುಮಾರ್, ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್, ಕಲ್ಲಾಪು, ಸುಮತಿ ಪ್ರಮೋದ್, ಎಂ ಕೆ ಪ್ರಸಾದ್, ಜಿಲ್ಲಾ ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್, ಲಕ್ಷ್ಮಣ ಗೌಡ, ಮ್ಯಾಕ್ಸಿಮ್ ಸಿಕ್ವೇರಾ, ರಾಜೀವ ಸಾಲಿಯಾನ್, ಮೆಲ್ವಿನ್ ಪಿಂಟೋ, ಹರಿದಾಸ ಕೇದೆ, ಲೋಕೇಶ್ ಗೌಡ, ಸೌಮ್ಯ ಲಾಯಿಲ , ಉಷಾ ಶರತ್ ಮುಂತಾದವರು ಉಪಸ್ಥಿತರಿದ್ದರು.

Related posts

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya
error: Content is protected !!