23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಸಂತ ಬಂಗೇರರ ಹುಟ್ಟುಹಬ್ಬ ಪ್ರಯುಕ್ತ ನಡೆಯುವ ರಕ್ತದಾನ ಮತ್ತು ಕಬಡ್ಡಿ ಪಂದ್ಯಾಟಗಳಲ್ಲಿ ಭಾಗವಹಿಸುವಂತೆ ಪ್ರೀತಿತಾ ಬಂಗೇರ ಮನವಿ

ಬೆಳ್ತಂಗಡಿ: ಕೀರ್ತಿಶೇಷ ಮಾಜಿ ಶಾಸಕ ವಸಂತ ಬಂಗೇರರ 79 ನೇ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿ ಸಮಿತಿ ವತಿಯಿಂದ ಬೆಳ್ತಂಗಡಿಯ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ನಡೆಯುವ ಬೃಹತ್ ರಕ್ತದಾನ ಶಿಬಿರ ಮತ್ತು ಬಂಗೇರ ಬ್ರಿಗೇಡ್ ವತಿಯಿಂದ ಮದ್ದಡ್ಕದ ಬಂಡಿಮಠ ಮೈದಾನದಲ್ಲಿ ನಡೆಯಲಿರುವ ಕಬಡ್ಡಿ ಪಂದ್ಯಾಟಗಳಲ್ಲಿ ಬಂಗೇರರ ಅಭಿಮಾನಿಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ವಸಂತ ಬಂಗೇರರ ಹಿರಿಯ ಪುತ್ರಿ ಪ್ರೀತಿತಾ ಬಂಗೇರ ಮನವಿ ಮಾಡಿದ್ದಾರೆ.

ಅವರು ಅಭಿಮಾನಿ ಸಮಿತಿಯ ವತಿಯಿಂದ ನಡೆದ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಸಭೆಯಲ್ಲಿ ಸಮಿತಿ ಅಧ್ಯಕ್ಷ ಈಶ್ವರ ಭಟ್, ಕಾರ್ಯದರ್ಶಿ ಮನೋಹರ ಕುಮಾರ್, ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್, ಕಲ್ಲಾಪು, ಸುಮತಿ ಪ್ರಮೋದ್, ಎಂ ಕೆ ಪ್ರಸಾದ್, ಜಿಲ್ಲಾ ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್, ಲಕ್ಷ್ಮಣ ಗೌಡ, ಮ್ಯಾಕ್ಸಿಮ್ ಸಿಕ್ವೇರಾ, ರಾಜೀವ ಸಾಲಿಯಾನ್, ಮೆಲ್ವಿನ್ ಪಿಂಟೋ, ಹರಿದಾಸ ಕೇದೆ, ಲೋಕೇಶ್ ಗೌಡ, ಸೌಮ್ಯ ಲಾಯಿಲ , ಉಷಾ ಶರತ್ ಮುಂತಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಎಕ್ಸೆಲ್ ಉದ್ಯೋಗಿಗಳಿಂದ ಅಭಿನಂದನಾ ಸಮಾರಂಭ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya

ಉಜಿರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರಕ್ಕೆ ವೇಣು ಉತ್ತಪ್ಪ ಭೇಟಿ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!