24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

ಬೆಳ್ತಂಗಡಿ: ಅಮೃತ ಸೋಮೇಶ್ವರ ಅವರು ಸದಾ ಮಾನವೀಯತೆಯ ಪರವಾಗಿದ್ದರು. ವಿಶ್ವ ಮಾನವ ಕಲ್ಪನೆ ಅವರ ಉಸಿರಾಗಿತ್ತು ಎಂದು ಸಾಹಿತಿ, ಹಿರಿಯ ಪತ್ರಕರ್ತ ಜಿ ಎನ್ ಮೋಹನ್ ತಿಳಿಸಿದರು.

ಬೆಳ್ತಂಗಡಿಯಲ್ಲಿ ಜರುಗಿದ ಅಮೃತ ಸೋಮೇಶ್ವರ ಅವರ ನೆನಪಿನ ಕಾರ್ಯಕ್ರಮ ‘ಅಮೃತ ಮಥನ’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸಮಾಜದ ಪ್ರತಿಯೊಬ್ಬರಿಗೂ ಗೌರವದ ಬದುಕು ಸಿಗಬೇಕು ಎನ್ನುವುದರ ಬಗ್ಗೆ ಅವರು ಖಚಿತ ನೋಟವನ್ನು ಹೊಂದಿದ್ದರು. ಅವರ ಸಾಹಿತ್ಯ ಇದನ್ನೇ ಪ್ರತಿಪಾದಿಸುತ್ತದೆ. ತುಳು ಸಾಹಿತ್ಯ ಮತ್ತು ಯಕ್ಷಗಾನ ರಂಗಕ್ಕೆ ಅವರು ನೀಡಿದ ತಿರುವು ಅಸಾಧಾರಣವಾದದ್ದು ಎಂದರು.

ತಂದೆಯ ವ್ಯಕ್ತಿತ್ವ ಹಾಗೂ ಸಾಹಿತ್ಯದ ಅವಲೋಕನ ನಡೆಸಿದ ಡಾ. ಚೇತನ ಸೋಮೇಶ್ವರ ಅವರು ತಂದೆ ಮೌನಿ ಆದರೆ ಸಮಾಜದ ಅನ್ಯಾಯದ ಬಗ್ಗೆ ಸದಾ ದನಿ ಎತ್ತುತ್ತಿದ್ದರು. ಅವರ ಬರಹಗಳು ಒಂದು ರೀತಿಯಲ್ಲಿ ಸಾರ್ವಜನಿಕ ಆಸ್ತಿಯಾಗಿತ್ತು. ಜನಸಾಮಾನ್ಯರು ಇವರ ಗೀತೆಗಳನ್ನು ತಮ್ಮ ಬದುಕಿನ ಪ್ರತಿಬಿಂಬ ಎಂದು ಭಾವಿಸಿದ್ದರು ಎಂದರು.

ರಂಗ ನಿರ್ದೇಶಕ ವಿದ್ದು ಉಚ್ಚಿಲ್ ಅವರು ಅಮೃತ ಸೋಮೇಶ್ವರ ಅವರ ರಂಗ ನಾಟಕಗಳ ಬಗ್ಗೆ ಮಾತನಾಡಿ ತುಳು ರಂಗಭೂಮಿಗೆ ಹೊಸತನ ದೊರಕಿದ್ದು ಅಮೃತರ ರಚನೆಗಳಿಂದ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರಾಜೇಶ್ವರಿ ಚೇತನ್ ಅವರು ತಮ್ಮ ಮಾವನವರ ಮಾನವೀಯ ಗುಣವನ್ನು ಸ್ಮರಿಸಿದರು.

ಸಮಾಜ ವಿಜ್ಞಾನಿ ಪ್ರಕಾಶ ಭಟ್, ಚರಣ್ ಕುಮಾರ್, ನರೇಂದ್ರ ರೈ ದೇರ್ಲ, ಜಿತು ನಿಡ್ಲೆ, ಡಾ. ಉದಯಚಂದ್ರ, ಡಾ. ರವಿನಾರಾಯಣ ಚಕ್ರಕೋಡಿ ಮಾತನಾಡಿದರು

ಬೆಳ್ತಂಗಡಿಯಲ್ಲಿ ಜರುಗಿದ ‘ಅಮೃತ ಮಥನ’ ಕಾರ್ಯಕ್ರಮದಲ್ಲಿ ಅಮೃತ ಸೋಮೇಶ್ವರ ಅವರ ನುಡಿಗಳ ಫಲಕವನ್ನು ಅನಾವರಣ ಮಾಡಲಾಯಿತು. ರಾಜೇಶ್ವರಿ ಚೇತನ್, ಪ್ರಕಾಶ ಭಟ್, ಚೇತನ್ ಸೋಮೇಶ್ವರ, ವಿದ್ದು ಉಚ್ಚಿಲ್, ಜಿ ಎನ್ ಮೋಹನ್ ಹಾಜರಿದ್ದರು

Related posts

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭ ಸುರೇಶ ಪುತ್ತೂರಾಯರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya
error: Content is protected !!