27 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿ

ಮಾಲಾಡಿ: ಪುರಿಯ-ಕುರಿಯೋಡಿರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ವಿರೋಧ: ಶೀಘ್ರ ಕಾಮಗಾರಿಗೆ ನಾಗರಿಕರ ಒತ್ತಾಯ

ಮಾಲಾಡಿ: ಇಲ್ಲಿಯ ಪುರಿಯ-ಕುರಿಯೋಡಿ ರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ನಾಗರಿಕರು ವಿರೋಧ ವ್ಯಕ್ತಪಡಿಸಿ, ಶೀಘ್ರ ಕಾಮಗಾರಿಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದಾರೆ.
ಪುರಿಯ ಕುರಿಯೋಡಿ ಗ್ರಾ.ಪ.ರಸ್ತೆಯಲ್ಲಿ ದಂಪತಿ ತನ್ನ ಮಗುವನ್ನು ಬೈಕಿನಲ್ಲಿ ಕುಳ್ಳಿರಿಸಿ ಸಂಚಾರ ಮಾಡುವಾಗ ಬೈಕ್ ಮಗುಚಿ ಬಿದ್ದು. ಮಗು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಗ್ರಾಮೀಣ ರಸ್ತೆಯಾದ ಪುರಿಯ-ಅಂಗನವಾಡಿ ಶಾಲೆಯ ಎದುರಿನ ಮಣ್ಣಿನ ಮಾರ್ಗ ಮುಂದುವರಿದು ಪ್ರಥಮ ತಿರುವಿನಲ್ಲಿ ರಸ್ತೆ ತೀರಾ ಅಪಾಯಕಾರಿ ಹಂತದಲ್ಲಿ ಇದ್ದು, ಕಾಂಕ್ರಿಟೀಕರಣ ಅವಶ್ಯಕತೆ ಇದೆ ಸದ್ರಿ ಪ್ರದೇಶದಲ್ಲಿ ಗೊಂದಲದ ಕಾರಣ ನೀಡಿ ಕಾಮಗಾರಿ ಸ್ಥಳಾಂತರ ಮಾಡಬಾರದು,
ನೀರು ಹೋಗುವ ಚರಂಡಿಗೆ ನೀರಾವರಿ ಪೈಪ್ ಹಾಕಿ ಮುಚ್ಚಲಾಗಿದ್ದು, ಸದ್ರಿ ರಸ್ತೆ ಚರಂಡಿಯನ್ನು ಸಮರ್ಪಕಗೊಳಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅಲ್ಲದೆ ಊರ ಪ್ರದೇಶದಲ್ಲಿ ರಸ್ತೆ ಅಗೆದು ಜಲ್ಲಿ ಹಾಕಿ ಹಲವು ಸಮಯಗಳಾಗಿದ್ದು, ಜಿಲ್ಲಾ ಪಂಚಾಯತಗೆ ಮನವಿ ಮಾಡಲಾಗಿದ್ದು, ಕಾಮಗಾರಿಯನ್ನು ಪೂರ್ಣಗೊಳಿಸಲು ಗುತ್ತಿದಾರರಿಗೆ ಸೂಚನೆ ಕೊಟ್ಟಿದೆ ಎಂಬ ಪತ್ರ ಮುಖೇನ ಮಾಹಿತಿ ಲಭ್ಯವಾಗಿದ್ದು, ಈ ಕಾಮಗಾರಿ ಸಾರ್ವಜನಿಕ ಹಿತದೃಷ್ಟಿಯಿಂದ ಶೀಘ್ರವಾಗಬೇಕು,ಅಲ್ಲದೆ ಪುಂಜಾಲಕಟ್ಟೆ-ಕುಕ್ಕೇಡಿ ಜಿ.ಪ.ರಸ್ತೆ ಕಾಮಗಾರಿ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು
ಮಾಜಿ.ಗ್ರಾ.ಸದಸ್ಯ ಗುರುಪ್ರಸಾದ್ ಮಾಲಾಡಿ ಒತ್ತಾಯಿಸಿದ್ದಾರೆ.
ಮನವಿ ನೀಡುವ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯ ಗುರುಪ್ರಸಾದ್ ಮಾಲಾಡಿ. ಸಾಮಾಜಿಕ ಕಾರ್ಯಕರ್ತರಾದ ರಾಘವ ದೇವಾಡಿಗ, ಬಾಬು ದೇವಾಡಿಗ, ಚಂದ್ರಯ ದೇವಾಡಿಗ ಊರಿನ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

Suddi Udaya

ತೋಟತ್ತಾಡಿ: ಹತ್ತು ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅನಿಲ್ ಕಕ್ಕಿಂಜೆ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya
error: Content is protected !!