23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಮಾಲಾಡಿ: ಪುರಿಯ-ಕುರಿಯೋಡಿರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ವಿರೋಧ: ಶೀಘ್ರ ಕಾಮಗಾರಿಗೆ ನಾಗರಿಕರ ಒತ್ತಾಯ

ಮಾಲಾಡಿ: ಇಲ್ಲಿಯ ಪುರಿಯ-ಕುರಿಯೋಡಿ ರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ನಾಗರಿಕರು ವಿರೋಧ ವ್ಯಕ್ತಪಡಿಸಿ, ಶೀಘ್ರ ಕಾಮಗಾರಿಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದಾರೆ.
ಪುರಿಯ ಕುರಿಯೋಡಿ ಗ್ರಾ.ಪ.ರಸ್ತೆಯಲ್ಲಿ ದಂಪತಿ ತನ್ನ ಮಗುವನ್ನು ಬೈಕಿನಲ್ಲಿ ಕುಳ್ಳಿರಿಸಿ ಸಂಚಾರ ಮಾಡುವಾಗ ಬೈಕ್ ಮಗುಚಿ ಬಿದ್ದು. ಮಗು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಗ್ರಾಮೀಣ ರಸ್ತೆಯಾದ ಪುರಿಯ-ಅಂಗನವಾಡಿ ಶಾಲೆಯ ಎದುರಿನ ಮಣ್ಣಿನ ಮಾರ್ಗ ಮುಂದುವರಿದು ಪ್ರಥಮ ತಿರುವಿನಲ್ಲಿ ರಸ್ತೆ ತೀರಾ ಅಪಾಯಕಾರಿ ಹಂತದಲ್ಲಿ ಇದ್ದು, ಕಾಂಕ್ರಿಟೀಕರಣ ಅವಶ್ಯಕತೆ ಇದೆ ಸದ್ರಿ ಪ್ರದೇಶದಲ್ಲಿ ಗೊಂದಲದ ಕಾರಣ ನೀಡಿ ಕಾಮಗಾರಿ ಸ್ಥಳಾಂತರ ಮಾಡಬಾರದು,
ನೀರು ಹೋಗುವ ಚರಂಡಿಗೆ ನೀರಾವರಿ ಪೈಪ್ ಹಾಕಿ ಮುಚ್ಚಲಾಗಿದ್ದು, ಸದ್ರಿ ರಸ್ತೆ ಚರಂಡಿಯನ್ನು ಸಮರ್ಪಕಗೊಳಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅಲ್ಲದೆ ಊರ ಪ್ರದೇಶದಲ್ಲಿ ರಸ್ತೆ ಅಗೆದು ಜಲ್ಲಿ ಹಾಕಿ ಹಲವು ಸಮಯಗಳಾಗಿದ್ದು, ಜಿಲ್ಲಾ ಪಂಚಾಯತಗೆ ಮನವಿ ಮಾಡಲಾಗಿದ್ದು, ಕಾಮಗಾರಿಯನ್ನು ಪೂರ್ಣಗೊಳಿಸಲು ಗುತ್ತಿದಾರರಿಗೆ ಸೂಚನೆ ಕೊಟ್ಟಿದೆ ಎಂಬ ಪತ್ರ ಮುಖೇನ ಮಾಹಿತಿ ಲಭ್ಯವಾಗಿದ್ದು, ಈ ಕಾಮಗಾರಿ ಸಾರ್ವಜನಿಕ ಹಿತದೃಷ್ಟಿಯಿಂದ ಶೀಘ್ರವಾಗಬೇಕು,ಅಲ್ಲದೆ ಪುಂಜಾಲಕಟ್ಟೆ-ಕುಕ್ಕೇಡಿ ಜಿ.ಪ.ರಸ್ತೆ ಕಾಮಗಾರಿ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು
ಮಾಜಿ.ಗ್ರಾ.ಸದಸ್ಯ ಗುರುಪ್ರಸಾದ್ ಮಾಲಾಡಿ ಒತ್ತಾಯಿಸಿದ್ದಾರೆ.
ಮನವಿ ನೀಡುವ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯ ಗುರುಪ್ರಸಾದ್ ಮಾಲಾಡಿ. ಸಾಮಾಜಿಕ ಕಾರ್ಯಕರ್ತರಾದ ರಾಘವ ದೇವಾಡಿಗ, ಬಾಬು ದೇವಾಡಿಗ, ಚಂದ್ರಯ ದೇವಾಡಿಗ ಊರಿನ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ ರವರಿಗೆ ‘ಆಯುಷ್ ಭೂಷಣ’ ಪುರಸ್ಕಾರ

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

Suddi Udaya

ಮರೋಡಿ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!