July 23, 2026
ಗ್ರಾಮಾಂತರ ಸುದ್ದಿ

ಮಾಲಾಡಿ: ಪುರಿಯ-ಕುರಿಯೋಡಿರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ವಿರೋಧ: ಶೀಘ್ರ ಕಾಮಗಾರಿಗೆ ನಾಗರಿಕರ ಒತ್ತಾಯ

ಮಾಲಾಡಿ: ಇಲ್ಲಿಯ ಪುರಿಯ-ಕುರಿಯೋಡಿ ರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ನಾಗರಿಕರು ವಿರೋಧ ವ್ಯಕ್ತಪಡಿಸಿ, ಶೀಘ್ರ ಕಾಮಗಾರಿಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದಾರೆ.
ಪುರಿಯ ಕುರಿಯೋಡಿ ಗ್ರಾ.ಪ.ರಸ್ತೆಯಲ್ಲಿ ದಂಪತಿ ತನ್ನ ಮಗುವನ್ನು ಬೈಕಿನಲ್ಲಿ ಕುಳ್ಳಿರಿಸಿ ಸಂಚಾರ ಮಾಡುವಾಗ ಬೈಕ್ ಮಗುಚಿ ಬಿದ್ದು. ಮಗು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಗ್ರಾಮೀಣ ರಸ್ತೆಯಾದ ಪುರಿಯ-ಅಂಗನವಾಡಿ ಶಾಲೆಯ ಎದುರಿನ ಮಣ್ಣಿನ ಮಾರ್ಗ ಮುಂದುವರಿದು ಪ್ರಥಮ ತಿರುವಿನಲ್ಲಿ ರಸ್ತೆ ತೀರಾ ಅಪಾಯಕಾರಿ ಹಂತದಲ್ಲಿ ಇದ್ದು, ಕಾಂಕ್ರಿಟೀಕರಣ ಅವಶ್ಯಕತೆ ಇದೆ ಸದ್ರಿ ಪ್ರದೇಶದಲ್ಲಿ ಗೊಂದಲದ ಕಾರಣ ನೀಡಿ ಕಾಮಗಾರಿ ಸ್ಥಳಾಂತರ ಮಾಡಬಾರದು,
ನೀರು ಹೋಗುವ ಚರಂಡಿಗೆ ನೀರಾವರಿ ಪೈಪ್ ಹಾಕಿ ಮುಚ್ಚಲಾಗಿದ್ದು, ಸದ್ರಿ ರಸ್ತೆ ಚರಂಡಿಯನ್ನು ಸಮರ್ಪಕಗೊಳಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅಲ್ಲದೆ ಊರ ಪ್ರದೇಶದಲ್ಲಿ ರಸ್ತೆ ಅಗೆದು ಜಲ್ಲಿ ಹಾಕಿ ಹಲವು ಸಮಯಗಳಾಗಿದ್ದು, ಜಿಲ್ಲಾ ಪಂಚಾಯತಗೆ ಮನವಿ ಮಾಡಲಾಗಿದ್ದು, ಕಾಮಗಾರಿಯನ್ನು ಪೂರ್ಣಗೊಳಿಸಲು ಗುತ್ತಿದಾರರಿಗೆ ಸೂಚನೆ ಕೊಟ್ಟಿದೆ ಎಂಬ ಪತ್ರ ಮುಖೇನ ಮಾಹಿತಿ ಲಭ್ಯವಾಗಿದ್ದು, ಈ ಕಾಮಗಾರಿ ಸಾರ್ವಜನಿಕ ಹಿತದೃಷ್ಟಿಯಿಂದ ಶೀಘ್ರವಾಗಬೇಕು,ಅಲ್ಲದೆ ಪುಂಜಾಲಕಟ್ಟೆ-ಕುಕ್ಕೇಡಿ ಜಿ.ಪ.ರಸ್ತೆ ಕಾಮಗಾರಿ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು
ಮಾಜಿ.ಗ್ರಾ.ಸದಸ್ಯ ಗುರುಪ್ರಸಾದ್ ಮಾಲಾಡಿ ಒತ್ತಾಯಿಸಿದ್ದಾರೆ.
ಮನವಿ ನೀಡುವ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯ ಗುರುಪ್ರಸಾದ್ ಮಾಲಾಡಿ. ಸಾಮಾಜಿಕ ಕಾರ್ಯಕರ್ತರಾದ ರಾಘವ ದೇವಾಡಿಗ, ಬಾಬು ದೇವಾಡಿಗ, ಚಂದ್ರಯ ದೇವಾಡಿಗ ಊರಿನ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಗೇರುಕಟ್ಟೆ :ಪರಪ್ಪು ಜಮಾಅತ್ ನಿಂದ ಅಭಿನಂದನಾ ಸಭೆ: ದರ್ಗಾ ಸುತ್ತಮುತ್ತ ಶಾಶ್ವತ ಕಾಮಗಾರಿ ನಡೆಸಿದ ಮುಸ್ಲಿಮ್ ಯೂತ್ ವಿಂಗ್ ಸಮಿತಿಗೆ ಗೌರವಾರ್ಪಣೆ

Suddi Udaya

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya
error: Content is protected !!