25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

ಬೆಳ್ತಂಗಡಿ: ಅಮೃತ ಸೋಮೇಶ್ವರ ಅವರು ಸದಾ ಮಾನವೀಯತೆಯ ಪರವಾಗಿದ್ದರು. ವಿಶ್ವ ಮಾನವ ಕಲ್ಪನೆ ಅವರ ಉಸಿರಾಗಿತ್ತು ಎಂದು ಸಾಹಿತಿ, ಹಿರಿಯ ಪತ್ರಕರ್ತ ಜಿ ಎನ್ ಮೋಹನ್ ತಿಳಿಸಿದರು.

ಬೆಳ್ತಂಗಡಿಯಲ್ಲಿ ಜರುಗಿದ ಅಮೃತ ಸೋಮೇಶ್ವರ ಅವರ ನೆನಪಿನ ಕಾರ್ಯಕ್ರಮ ‘ಅಮೃತ ಮಥನ’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸಮಾಜದ ಪ್ರತಿಯೊಬ್ಬರಿಗೂ ಗೌರವದ ಬದುಕು ಸಿಗಬೇಕು ಎನ್ನುವುದರ ಬಗ್ಗೆ ಅವರು ಖಚಿತ ನೋಟವನ್ನು ಹೊಂದಿದ್ದರು. ಅವರ ಸಾಹಿತ್ಯ ಇದನ್ನೇ ಪ್ರತಿಪಾದಿಸುತ್ತದೆ. ತುಳು ಸಾಹಿತ್ಯ ಮತ್ತು ಯಕ್ಷಗಾನ ರಂಗಕ್ಕೆ ಅವರು ನೀಡಿದ ತಿರುವು ಅಸಾಧಾರಣವಾದದ್ದು ಎಂದರು.

ತಂದೆಯ ವ್ಯಕ್ತಿತ್ವ ಹಾಗೂ ಸಾಹಿತ್ಯದ ಅವಲೋಕನ ನಡೆಸಿದ ಡಾ. ಚೇತನ ಸೋಮೇಶ್ವರ ಅವರು ತಂದೆ ಮೌನಿ ಆದರೆ ಸಮಾಜದ ಅನ್ಯಾಯದ ಬಗ್ಗೆ ಸದಾ ದನಿ ಎತ್ತುತ್ತಿದ್ದರು. ಅವರ ಬರಹಗಳು ಒಂದು ರೀತಿಯಲ್ಲಿ ಸಾರ್ವಜನಿಕ ಆಸ್ತಿಯಾಗಿತ್ತು. ಜನಸಾಮಾನ್ಯರು ಇವರ ಗೀತೆಗಳನ್ನು ತಮ್ಮ ಬದುಕಿನ ಪ್ರತಿಬಿಂಬ ಎಂದು ಭಾವಿಸಿದ್ದರು ಎಂದರು.

ರಂಗ ನಿರ್ದೇಶಕ ವಿದ್ದು ಉಚ್ಚಿಲ್ ಅವರು ಅಮೃತ ಸೋಮೇಶ್ವರ ಅವರ ರಂಗ ನಾಟಕಗಳ ಬಗ್ಗೆ ಮಾತನಾಡಿ ತುಳು ರಂಗಭೂಮಿಗೆ ಹೊಸತನ ದೊರಕಿದ್ದು ಅಮೃತರ ರಚನೆಗಳಿಂದ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರಾಜೇಶ್ವರಿ ಚೇತನ್ ಅವರು ತಮ್ಮ ಮಾವನವರ ಮಾನವೀಯ ಗುಣವನ್ನು ಸ್ಮರಿಸಿದರು.

ಸಮಾಜ ವಿಜ್ಞಾನಿ ಪ್ರಕಾಶ ಭಟ್, ಚರಣ್ ಕುಮಾರ್, ನರೇಂದ್ರ ರೈ ದೇರ್ಲ, ಜಿತು ನಿಡ್ಲೆ, ಡಾ. ಉದಯಚಂದ್ರ, ಡಾ. ರವಿನಾರಾಯಣ ಚಕ್ರಕೋಡಿ ಮಾತನಾಡಿದರು

ಬೆಳ್ತಂಗಡಿಯಲ್ಲಿ ಜರುಗಿದ ‘ಅಮೃತ ಮಥನ’ ಕಾರ್ಯಕ್ರಮದಲ್ಲಿ ಅಮೃತ ಸೋಮೇಶ್ವರ ಅವರ ನುಡಿಗಳ ಫಲಕವನ್ನು ಅನಾವರಣ ಮಾಡಲಾಯಿತು. ರಾಜೇಶ್ವರಿ ಚೇತನ್, ಪ್ರಕಾಶ ಭಟ್, ಚೇತನ್ ಸೋಮೇಶ್ವರ, ವಿದ್ದು ಉಚ್ಚಿಲ್, ಜಿ ಎನ್ ಮೋಹನ್ ಹಾಜರಿದ್ದರು

Related posts

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya
error: Content is protected !!