23.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿ

ಮಾಲಾಡಿ: ಪುರಿಯ-ಕುರಿಯೋಡಿರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ವಿರೋಧ: ಶೀಘ್ರ ಕಾಮಗಾರಿಗೆ ನಾಗರಿಕರ ಒತ್ತಾಯ

ಮಾಲಾಡಿ: ಇಲ್ಲಿಯ ಪುರಿಯ-ಕುರಿಯೋಡಿ ರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ನಾಗರಿಕರು ವಿರೋಧ ವ್ಯಕ್ತಪಡಿಸಿ, ಶೀಘ್ರ ಕಾಮಗಾರಿಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದಾರೆ.
ಪುರಿಯ ಕುರಿಯೋಡಿ ಗ್ರಾ.ಪ.ರಸ್ತೆಯಲ್ಲಿ ದಂಪತಿ ತನ್ನ ಮಗುವನ್ನು ಬೈಕಿನಲ್ಲಿ ಕುಳ್ಳಿರಿಸಿ ಸಂಚಾರ ಮಾಡುವಾಗ ಬೈಕ್ ಮಗುಚಿ ಬಿದ್ದು. ಮಗು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಗ್ರಾಮೀಣ ರಸ್ತೆಯಾದ ಪುರಿಯ-ಅಂಗನವಾಡಿ ಶಾಲೆಯ ಎದುರಿನ ಮಣ್ಣಿನ ಮಾರ್ಗ ಮುಂದುವರಿದು ಪ್ರಥಮ ತಿರುವಿನಲ್ಲಿ ರಸ್ತೆ ತೀರಾ ಅಪಾಯಕಾರಿ ಹಂತದಲ್ಲಿ ಇದ್ದು, ಕಾಂಕ್ರಿಟೀಕರಣ ಅವಶ್ಯಕತೆ ಇದೆ ಸದ್ರಿ ಪ್ರದೇಶದಲ್ಲಿ ಗೊಂದಲದ ಕಾರಣ ನೀಡಿ ಕಾಮಗಾರಿ ಸ್ಥಳಾಂತರ ಮಾಡಬಾರದು,
ನೀರು ಹೋಗುವ ಚರಂಡಿಗೆ ನೀರಾವರಿ ಪೈಪ್ ಹಾಕಿ ಮುಚ್ಚಲಾಗಿದ್ದು, ಸದ್ರಿ ರಸ್ತೆ ಚರಂಡಿಯನ್ನು ಸಮರ್ಪಕಗೊಳಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅಲ್ಲದೆ ಊರ ಪ್ರದೇಶದಲ್ಲಿ ರಸ್ತೆ ಅಗೆದು ಜಲ್ಲಿ ಹಾಕಿ ಹಲವು ಸಮಯಗಳಾಗಿದ್ದು, ಜಿಲ್ಲಾ ಪಂಚಾಯತಗೆ ಮನವಿ ಮಾಡಲಾಗಿದ್ದು, ಕಾಮಗಾರಿಯನ್ನು ಪೂರ್ಣಗೊಳಿಸಲು ಗುತ್ತಿದಾರರಿಗೆ ಸೂಚನೆ ಕೊಟ್ಟಿದೆ ಎಂಬ ಪತ್ರ ಮುಖೇನ ಮಾಹಿತಿ ಲಭ್ಯವಾಗಿದ್ದು, ಈ ಕಾಮಗಾರಿ ಸಾರ್ವಜನಿಕ ಹಿತದೃಷ್ಟಿಯಿಂದ ಶೀಘ್ರವಾಗಬೇಕು,ಅಲ್ಲದೆ ಪುಂಜಾಲಕಟ್ಟೆ-ಕುಕ್ಕೇಡಿ ಜಿ.ಪ.ರಸ್ತೆ ಕಾಮಗಾರಿ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು
ಮಾಜಿ.ಗ್ರಾ.ಸದಸ್ಯ ಗುರುಪ್ರಸಾದ್ ಮಾಲಾಡಿ ಒತ್ತಾಯಿಸಿದ್ದಾರೆ.
ಮನವಿ ನೀಡುವ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯ ಗುರುಪ್ರಸಾದ್ ಮಾಲಾಡಿ. ಸಾಮಾಜಿಕ ಕಾರ್ಯಕರ್ತರಾದ ರಾಘವ ದೇವಾಡಿಗ, ಬಾಬು ದೇವಾಡಿಗ, ಚಂದ್ರಯ ದೇವಾಡಿಗ ಊರಿನ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಭಾರಿ ಸಿಡಿಲು ಮಳೆ: ಕೊಯ್ಯೂರು ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದ ಬೆಂಕಿ

Suddi Udaya

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ

Suddi Udaya

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಧರ್ಮಸ್ಥಳ ಶಿವಶಕ್ತಿ ಅಯ್ಯಂಗಾರ್ ಬೇಕರಿ, ಉಜಿರೆಯ ಅಮರ್ಥ್ಯ ಬೇಕರಿಯಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!