38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

ಬೆಳ್ತಂಗಡಿ: ಅಮೃತ ಸೋಮೇಶ್ವರ ಅವರು ಸದಾ ಮಾನವೀಯತೆಯ ಪರವಾಗಿದ್ದರು. ವಿಶ್ವ ಮಾನವ ಕಲ್ಪನೆ ಅವರ ಉಸಿರಾಗಿತ್ತು ಎಂದು ಸಾಹಿತಿ, ಹಿರಿಯ ಪತ್ರಕರ್ತ ಜಿ ಎನ್ ಮೋಹನ್ ತಿಳಿಸಿದರು.

ಬೆಳ್ತಂಗಡಿಯಲ್ಲಿ ಜರುಗಿದ ಅಮೃತ ಸೋಮೇಶ್ವರ ಅವರ ನೆನಪಿನ ಕಾರ್ಯಕ್ರಮ ‘ಅಮೃತ ಮಥನ’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸಮಾಜದ ಪ್ರತಿಯೊಬ್ಬರಿಗೂ ಗೌರವದ ಬದುಕು ಸಿಗಬೇಕು ಎನ್ನುವುದರ ಬಗ್ಗೆ ಅವರು ಖಚಿತ ನೋಟವನ್ನು ಹೊಂದಿದ್ದರು. ಅವರ ಸಾಹಿತ್ಯ ಇದನ್ನೇ ಪ್ರತಿಪಾದಿಸುತ್ತದೆ. ತುಳು ಸಾಹಿತ್ಯ ಮತ್ತು ಯಕ್ಷಗಾನ ರಂಗಕ್ಕೆ ಅವರು ನೀಡಿದ ತಿರುವು ಅಸಾಧಾರಣವಾದದ್ದು ಎಂದರು.

ತಂದೆಯ ವ್ಯಕ್ತಿತ್ವ ಹಾಗೂ ಸಾಹಿತ್ಯದ ಅವಲೋಕನ ನಡೆಸಿದ ಡಾ. ಚೇತನ ಸೋಮೇಶ್ವರ ಅವರು ತಂದೆ ಮೌನಿ ಆದರೆ ಸಮಾಜದ ಅನ್ಯಾಯದ ಬಗ್ಗೆ ಸದಾ ದನಿ ಎತ್ತುತ್ತಿದ್ದರು. ಅವರ ಬರಹಗಳು ಒಂದು ರೀತಿಯಲ್ಲಿ ಸಾರ್ವಜನಿಕ ಆಸ್ತಿಯಾಗಿತ್ತು. ಜನಸಾಮಾನ್ಯರು ಇವರ ಗೀತೆಗಳನ್ನು ತಮ್ಮ ಬದುಕಿನ ಪ್ರತಿಬಿಂಬ ಎಂದು ಭಾವಿಸಿದ್ದರು ಎಂದರು.

ರಂಗ ನಿರ್ದೇಶಕ ವಿದ್ದು ಉಚ್ಚಿಲ್ ಅವರು ಅಮೃತ ಸೋಮೇಶ್ವರ ಅವರ ರಂಗ ನಾಟಕಗಳ ಬಗ್ಗೆ ಮಾತನಾಡಿ ತುಳು ರಂಗಭೂಮಿಗೆ ಹೊಸತನ ದೊರಕಿದ್ದು ಅಮೃತರ ರಚನೆಗಳಿಂದ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರಾಜೇಶ್ವರಿ ಚೇತನ್ ಅವರು ತಮ್ಮ ಮಾವನವರ ಮಾನವೀಯ ಗುಣವನ್ನು ಸ್ಮರಿಸಿದರು.

ಸಮಾಜ ವಿಜ್ಞಾನಿ ಪ್ರಕಾಶ ಭಟ್, ಚರಣ್ ಕುಮಾರ್, ನರೇಂದ್ರ ರೈ ದೇರ್ಲ, ಜಿತು ನಿಡ್ಲೆ, ಡಾ. ಉದಯಚಂದ್ರ, ಡಾ. ರವಿನಾರಾಯಣ ಚಕ್ರಕೋಡಿ ಮಾತನಾಡಿದರು

ಬೆಳ್ತಂಗಡಿಯಲ್ಲಿ ಜರುಗಿದ ‘ಅಮೃತ ಮಥನ’ ಕಾರ್ಯಕ್ರಮದಲ್ಲಿ ಅಮೃತ ಸೋಮೇಶ್ವರ ಅವರ ನುಡಿಗಳ ಫಲಕವನ್ನು ಅನಾವರಣ ಮಾಡಲಾಯಿತು. ರಾಜೇಶ್ವರಿ ಚೇತನ್, ಪ್ರಕಾಶ ಭಟ್, ಚೇತನ್ ಸೋಮೇಶ್ವರ, ವಿದ್ದು ಉಚ್ಚಿಲ್, ಜಿ ಎನ್ ಮೋಹನ್ ಹಾಜರಿದ್ದರು

Related posts

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya

ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

Suddi Udaya
error: Content is protected !!