25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಮಾಲಾಡಿ: ಪುರಿಯ-ಕುರಿಯೋಡಿರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ವಿರೋಧ: ಶೀಘ್ರ ಕಾಮಗಾರಿಗೆ ನಾಗರಿಕರ ಒತ್ತಾಯ

ಮಾಲಾಡಿ: ಇಲ್ಲಿಯ ಪುರಿಯ-ಕುರಿಯೋಡಿ ರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ನಾಗರಿಕರು ವಿರೋಧ ವ್ಯಕ್ತಪಡಿಸಿ, ಶೀಘ್ರ ಕಾಮಗಾರಿಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದಾರೆ.
ಪುರಿಯ ಕುರಿಯೋಡಿ ಗ್ರಾ.ಪ.ರಸ್ತೆಯಲ್ಲಿ ದಂಪತಿ ತನ್ನ ಮಗುವನ್ನು ಬೈಕಿನಲ್ಲಿ ಕುಳ್ಳಿರಿಸಿ ಸಂಚಾರ ಮಾಡುವಾಗ ಬೈಕ್ ಮಗುಚಿ ಬಿದ್ದು. ಮಗು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಗ್ರಾಮೀಣ ರಸ್ತೆಯಾದ ಪುರಿಯ-ಅಂಗನವಾಡಿ ಶಾಲೆಯ ಎದುರಿನ ಮಣ್ಣಿನ ಮಾರ್ಗ ಮುಂದುವರಿದು ಪ್ರಥಮ ತಿರುವಿನಲ್ಲಿ ರಸ್ತೆ ತೀರಾ ಅಪಾಯಕಾರಿ ಹಂತದಲ್ಲಿ ಇದ್ದು, ಕಾಂಕ್ರಿಟೀಕರಣ ಅವಶ್ಯಕತೆ ಇದೆ ಸದ್ರಿ ಪ್ರದೇಶದಲ್ಲಿ ಗೊಂದಲದ ಕಾರಣ ನೀಡಿ ಕಾಮಗಾರಿ ಸ್ಥಳಾಂತರ ಮಾಡಬಾರದು,
ನೀರು ಹೋಗುವ ಚರಂಡಿಗೆ ನೀರಾವರಿ ಪೈಪ್ ಹಾಕಿ ಮುಚ್ಚಲಾಗಿದ್ದು, ಸದ್ರಿ ರಸ್ತೆ ಚರಂಡಿಯನ್ನು ಸಮರ್ಪಕಗೊಳಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅಲ್ಲದೆ ಊರ ಪ್ರದೇಶದಲ್ಲಿ ರಸ್ತೆ ಅಗೆದು ಜಲ್ಲಿ ಹಾಕಿ ಹಲವು ಸಮಯಗಳಾಗಿದ್ದು, ಜಿಲ್ಲಾ ಪಂಚಾಯತಗೆ ಮನವಿ ಮಾಡಲಾಗಿದ್ದು, ಕಾಮಗಾರಿಯನ್ನು ಪೂರ್ಣಗೊಳಿಸಲು ಗುತ್ತಿದಾರರಿಗೆ ಸೂಚನೆ ಕೊಟ್ಟಿದೆ ಎಂಬ ಪತ್ರ ಮುಖೇನ ಮಾಹಿತಿ ಲಭ್ಯವಾಗಿದ್ದು, ಈ ಕಾಮಗಾರಿ ಸಾರ್ವಜನಿಕ ಹಿತದೃಷ್ಟಿಯಿಂದ ಶೀಘ್ರವಾಗಬೇಕು,ಅಲ್ಲದೆ ಪುಂಜಾಲಕಟ್ಟೆ-ಕುಕ್ಕೇಡಿ ಜಿ.ಪ.ರಸ್ತೆ ಕಾಮಗಾರಿ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು
ಮಾಜಿ.ಗ್ರಾ.ಸದಸ್ಯ ಗುರುಪ್ರಸಾದ್ ಮಾಲಾಡಿ ಒತ್ತಾಯಿಸಿದ್ದಾರೆ.
ಮನವಿ ನೀಡುವ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯ ಗುರುಪ್ರಸಾದ್ ಮಾಲಾಡಿ. ಸಾಮಾಜಿಕ ಕಾರ್ಯಕರ್ತರಾದ ರಾಘವ ದೇವಾಡಿಗ, ಬಾಬು ದೇವಾಡಿಗ, ಚಂದ್ರಯ ದೇವಾಡಿಗ ಊರಿನ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

Suddi Udaya

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ

Suddi Udaya

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!